ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಯಿತು. ಸದ್ಯ ಕುಮಾರಸ್ವಾಮಿ ಅವರು ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಕಳೆದ 15 ದಿನಗಳಿಂದ ಕುಮಾರಸ್ವಾಮಿ ಅವರು ನಿರಂತರ ಓಡಾಟ ನಡೆಸಿದ್ದಾರೆ. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ. ಅವರ ಆರೋಗ್ಯದಲ್ಲಿ ಏನು ಸಮಸ್ಯೆಯಿಲ್ಲ. ಕೆಲಸದ ಒತ್ತಡದ ನಡುವೆ ಬೆಳಿಗ್ಗೆ 4.30ಕ್ಕೆ ಎದ್ದೇಳುತ್ತಿದ್ದರು. ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದೆ. ಡಾಕ್ಟರ್ ಕೂಡ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಯತೀಶ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಯಾರೂ ಏನೂ ಆತಂಕ ಪಡುವ ಅಗತ್ಯವಿಲ್ಲ. ಅವರು ಅಡ್ಮಿಷನ್ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…