ರಾಜ್ಯ

ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಪುತ್ರ ನಿಖಿಲ್‌ ಭಾವುಕ

ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಯಿತು. ಸದ್ಯ ಕುಮಾರಸ್ವಾಮಿ ಅವರು ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಕಳೆದ 15 ದಿನಗಳಿಂದ ಕುಮಾರಸ್ವಾಮಿ ಅವರು ನಿರಂತರ ಓಡಾಟ ನಡೆಸಿದ್ದಾರೆ. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ. ಅವರ ಆರೋಗ್ಯದಲ್ಲಿ ಏನು ಸಮಸ್ಯೆಯಿಲ್ಲ. ಕೆಲಸದ ಒತ್ತಡದ ನಡುವೆ ಬೆಳಿಗ್ಗೆ 4.30ಕ್ಕೆ ಎದ್ದೇಳುತ್ತಿದ್ದರು. ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದೆ. ಡಾಕ್ಟರ್‌ ಕೂಡ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಯತೀಶ್‌ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಯಾರೂ ಏನೂ ಆತಂಕ ಪಡುವ ಅಗತ್ಯವಿಲ್ಲ. ಅವರು ಅಡ್ಮಿಷನ್‌ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

2 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

2 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

3 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago