ರಾಜ್ಯ

ಇವಿಎಂ ಹ್ಯಾಕ್‌ ಬಗ್ಗೆ ಸಾಕ್ಷಿ ಜೊತೆ ಮಾತನಾಡಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ತುಮಕೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಓನರ್‌ ಎಲಾನ್‌ ಮಸ್ಕ್‌ ಹೇಳಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡಾ ಬೆಂಬಲಿಸಿದ್ದರು.

ಈ ವಿಚಾರವಾಗಿ ಭಾರತೀಯ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಅದನ್ನು ನಿರೂಪಿಸಿ ಎಂದು ಬಹಿರಂಗ ಸವಾಲು ಹಾಕಿದ್ದರು. ಇದೆಲ್ಲದರ ನಡುವೆ ಕೇಂದ್ರ ಉಕ್ಕು ಹಾಗೂ ಬೃಹತ್‌ ಖಾತೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರಸ್‌ ನಡೆಯನ್ನು ಖಂಡಿಸಿದ್ದಾರೆ.

ನಗರದಲ್ಲಿಂದು (ಜೂನ್‌.17) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇವಿಎಂ ಅನ್ನು ಹ್ಯಾಕ್‌ ಮಾಡಬಹುದು ಎಂದು ಹೇಳುವವರು ಮೊದಲು ಸಾಕ್ಷಿ ಕೊಡಲಿ, ಆ ಬಳಿಕ ಸತ್ಯ ಏನೆಂಬುದು ಎಲ್ಲರಿಗೂ ತಿಳಿಯುತ್ತದೆ ಎಂದು ತಿವಿದಿದ್ದಾರೆ.

ಹ್ಯಾಕ್‌ ಮಾಡಿ ಕಾಂಗ್ರೆಸ್‌ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದಿತೇ ಎಂದು ಸಹಾ ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ.

ಇವಿಎಂ ಹ್ಯಾಕ್‌ ಮಾಡಬಹುದು ಎಂದು ಹಲವಾರು ವರ್ಷಗಳಿಂದಲೂ ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ ಈವರೆಗೆ ಯಾರೂ ನಿರೂಪಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಕೂಡಾ ಚರ್ಚೆ ಮಾಡಿದ್ದು, ಇವುಗಳೆಲ್ಲಾ ಊಹಾಪೋಗಳು ಎಂದು ಚುನಾವಣಾ ಆಯೋಗವೇ ಹೇಳಿದೆ ಎಂದು ಟಾಂಗ್‌ ಕೊಟ್ಟರು.

ಇನ್ನು ರಾಜ್ಯದಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಎಚ್‌ಡಿಕೆ ಅವರ ಅಧಿಕಾರಾವಧಿಯಲ್ಲಿ ಏರಿಕೆ ಮಾಡಿದ್ದರು ಎಂದು ದೂರಿರುವ ಸಂಬಂಧ, ನನ್ನ ಅಧಿಕಾರವಧಿಯಲ್ಲಿ ಬೆಲೆ ಏರಿಕೆ ಮಾಡಿದ್ದರೇ ಅದರ ದಾಖಲೆಗಳನ್ನು ಕೊಡಲಿ ನಾನು ಸಿಎಂ ಆಗಿದ್ದ ಸಮಯದಲ್ಲಿ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡಿದ ಸಂದರ್ಭದಲ್ಲಿ ಅಗತ್ಯ ಹಣ ನಿಯೋಜಿಸಲು ಬೆಲೆ ಏರಿಕೆ ಮಾಡಲು ಚಿಂತಿಸಿದ್ದೆ. ಆದರೆ, ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ ಈಗ ನೋಡಿದರೆ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳಲು ಒಂದು ಇತಿಮಿತಿ ಬೇಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

5 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

10 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

10 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

11 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

12 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

12 hours ago