ರಾಜ್ಯ

ಇವಿಎಂ ಹ್ಯಾಕ್‌ ಬಗ್ಗೆ ಸಾಕ್ಷಿ ಜೊತೆ ಮಾತನಾಡಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ತುಮಕೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಓನರ್‌ ಎಲಾನ್‌ ಮಸ್ಕ್‌ ಹೇಳಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡಾ ಬೆಂಬಲಿಸಿದ್ದರು.

ಈ ವಿಚಾರವಾಗಿ ಭಾರತೀಯ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಅದನ್ನು ನಿರೂಪಿಸಿ ಎಂದು ಬಹಿರಂಗ ಸವಾಲು ಹಾಕಿದ್ದರು. ಇದೆಲ್ಲದರ ನಡುವೆ ಕೇಂದ್ರ ಉಕ್ಕು ಹಾಗೂ ಬೃಹತ್‌ ಖಾತೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರಸ್‌ ನಡೆಯನ್ನು ಖಂಡಿಸಿದ್ದಾರೆ.

ನಗರದಲ್ಲಿಂದು (ಜೂನ್‌.17) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇವಿಎಂ ಅನ್ನು ಹ್ಯಾಕ್‌ ಮಾಡಬಹುದು ಎಂದು ಹೇಳುವವರು ಮೊದಲು ಸಾಕ್ಷಿ ಕೊಡಲಿ, ಆ ಬಳಿಕ ಸತ್ಯ ಏನೆಂಬುದು ಎಲ್ಲರಿಗೂ ತಿಳಿಯುತ್ತದೆ ಎಂದು ತಿವಿದಿದ್ದಾರೆ.

ಹ್ಯಾಕ್‌ ಮಾಡಿ ಕಾಂಗ್ರೆಸ್‌ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದಿತೇ ಎಂದು ಸಹಾ ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ.

ಇವಿಎಂ ಹ್ಯಾಕ್‌ ಮಾಡಬಹುದು ಎಂದು ಹಲವಾರು ವರ್ಷಗಳಿಂದಲೂ ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ ಈವರೆಗೆ ಯಾರೂ ನಿರೂಪಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಕೂಡಾ ಚರ್ಚೆ ಮಾಡಿದ್ದು, ಇವುಗಳೆಲ್ಲಾ ಊಹಾಪೋಗಳು ಎಂದು ಚುನಾವಣಾ ಆಯೋಗವೇ ಹೇಳಿದೆ ಎಂದು ಟಾಂಗ್‌ ಕೊಟ್ಟರು.

ಇನ್ನು ರಾಜ್ಯದಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಎಚ್‌ಡಿಕೆ ಅವರ ಅಧಿಕಾರಾವಧಿಯಲ್ಲಿ ಏರಿಕೆ ಮಾಡಿದ್ದರು ಎಂದು ದೂರಿರುವ ಸಂಬಂಧ, ನನ್ನ ಅಧಿಕಾರವಧಿಯಲ್ಲಿ ಬೆಲೆ ಏರಿಕೆ ಮಾಡಿದ್ದರೇ ಅದರ ದಾಖಲೆಗಳನ್ನು ಕೊಡಲಿ ನಾನು ಸಿಎಂ ಆಗಿದ್ದ ಸಮಯದಲ್ಲಿ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡಿದ ಸಂದರ್ಭದಲ್ಲಿ ಅಗತ್ಯ ಹಣ ನಿಯೋಜಿಸಲು ಬೆಲೆ ಏರಿಕೆ ಮಾಡಲು ಚಿಂತಿಸಿದ್ದೆ. ಆದರೆ, ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ ಈಗ ನೋಡಿದರೆ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳಲು ಒಂದು ಇತಿಮಿತಿ ಬೇಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

48 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

55 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago