ತುಮಕೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕ್ ಮಾಡಬಹುದು ಎಂದು ಟೆಸ್ಲಾ ಓನರ್ ಎಲಾನ್ ಮಸ್ಕ್ ಹೇಳಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಬೆಂಬಲಿಸಿದ್ದರು.
ಈ ವಿಚಾರವಾಗಿ ಭಾರತೀಯ ಚುನಾವಣಾ ಆಯೋಗವು ಎಲಾನ್ ಮಸ್ಕ್ಗೆ ಅದನ್ನು ನಿರೂಪಿಸಿ ಎಂದು ಬಹಿರಂಗ ಸವಾಲು ಹಾಕಿದ್ದರು. ಇದೆಲ್ಲದರ ನಡುವೆ ಕೇಂದ್ರ ಉಕ್ಕು ಹಾಗೂ ಬೃಹತ್ ಖಾತೆ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಕಾಂಗ್ರಸ್ ನಡೆಯನ್ನು ಖಂಡಿಸಿದ್ದಾರೆ.
ನಗರದಲ್ಲಿಂದು (ಜೂನ್.17) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇವಿಎಂ ಅನ್ನು ಹ್ಯಾಕ್ ಮಾಡಬಹುದು ಎಂದು ಹೇಳುವವರು ಮೊದಲು ಸಾಕ್ಷಿ ಕೊಡಲಿ, ಆ ಬಳಿಕ ಸತ್ಯ ಏನೆಂಬುದು ಎಲ್ಲರಿಗೂ ತಿಳಿಯುತ್ತದೆ ಎಂದು ತಿವಿದಿದ್ದಾರೆ.
ಹ್ಯಾಕ್ ಮಾಡಿ ಕಾಂಗ್ರೆಸ್ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದಿತೇ ಎಂದು ಸಹಾ ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ.
ಇವಿಎಂ ಹ್ಯಾಕ್ ಮಾಡಬಹುದು ಎಂದು ಹಲವಾರು ವರ್ಷಗಳಿಂದಲೂ ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ ಈವರೆಗೆ ಯಾರೂ ನಿರೂಪಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡಾ ಚರ್ಚೆ ಮಾಡಿದ್ದು, ಇವುಗಳೆಲ್ಲಾ ಊಹಾಪೋಗಳು ಎಂದು ಚುನಾವಣಾ ಆಯೋಗವೇ ಹೇಳಿದೆ ಎಂದು ಟಾಂಗ್ ಕೊಟ್ಟರು.
ಇನ್ನು ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಎಚ್ಡಿಕೆ ಅವರ ಅಧಿಕಾರಾವಧಿಯಲ್ಲಿ ಏರಿಕೆ ಮಾಡಿದ್ದರು ಎಂದು ದೂರಿರುವ ಸಂಬಂಧ, ನನ್ನ ಅಧಿಕಾರವಧಿಯಲ್ಲಿ ಬೆಲೆ ಏರಿಕೆ ಮಾಡಿದ್ದರೇ ಅದರ ದಾಖಲೆಗಳನ್ನು ಕೊಡಲಿ ನಾನು ಸಿಎಂ ಆಗಿದ್ದ ಸಮಯದಲ್ಲಿ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡಿದ ಸಂದರ್ಭದಲ್ಲಿ ಅಗತ್ಯ ಹಣ ನಿಯೋಜಿಸಲು ಬೆಲೆ ಏರಿಕೆ ಮಾಡಲು ಚಿಂತಿಸಿದ್ದೆ. ಆದರೆ, ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ ಈಗ ನೋಡಿದರೆ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳಲು ಒಂದು ಇತಿಮಿತಿ ಬೇಕು ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…