ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಕರ್ಮಕಾಂಡವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.
ಸಚಿವ ನಾಗೇಂದ್ರ ಅವರ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಪ್ರಕರಣದಲ್ಲಿ ಸುಮಾರು ₹80 ರಿಂದ ₹85 ಕೋಟಿ ರವಾನೆ ಆಗಿರುವ ಮಾಹಿತಿ ಇದೆ. ರಾಜೀನಾಮೆ ನಿರ್ಧಾರ ಮೊದಲೇ ಆಗಬೇಕಿತ್ತು. ಇಷ್ಟೆಲ್ಲಾ ಕೇವಲ ಒಬ್ಬ ಮಂತ್ರಿಯಿಂದ ಆಗಿರುವುದಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಯೇ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ರಾಜೀನಾಮೆ ಸಂಬಂಧ ಸಿಎಂ, ಡಿಸಿಎಂ ಹೇಳಿಕೆಗಳನ್ನು ನಾನು ಗಮನಿಸಿದೆ. ರಾಜೀನಾಮೆ ನೀಡುವುದಕ್ಕೆ ಸಚಿವರಿಗೆ ನಾನು ಹೇಳಿಲ್ಲ, ನಾನು ಹೇಳಿಲ್ಲ ಎನ್ನುತ್ತಿದ್ದರು. ಇದು ಬರೀ ಡ್ರಾಮಾ ಅಷ್ಟೇ. ಆ ಮಂತ್ರಿಗೆ ರಾಜೀನಾಮೆ ನೀಡಿ ಅನ್ನುವ ಧೈರ್ಯ ಇವರಿಗೆ ಇರಲಿಲ್ಲ. ಅದಕ್ಕೆ ಕಾರಣ ಹಗರಣದಲ್ಲಿ ದೊಡ್ಡ ಮಟ್ಟದ ಕೈಗಳಿವೆ. ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಈ ಹಗರಣ ನಡೆದಿದೆ. ಅದನ್ನು ಇವರೆಲ್ಲರೂ ಸೇರಿ ಮುಚ್ಚಿಟ್ಟಿದ್ದಾರೆ, ಯಾಕೆ? ಆ ಅಧಿಕಾರಿ ಸಾವಿನಿಂದ, ಮಾಧ್ಯಮಗಳ ಮೂಲಕ ಇದು ಹೊರ ಬರದೇ ಇದ್ದಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಹಗರಣದ ಒಳಹೊಕ್ಕು ತನಿಖೆ ನಡೆಸಬೇಕು. ಸರ್ಕಾರ ಮತ್ತು ಸಿಎಂ, ಡಿಸಿಎಂ ಗಮನಕ್ಕೆ ಬಂದೇ ಈ ಅಕ್ರಮ ನಡೆದಿದೆ. ಕೇವಲ ಒಂದು ಗಂಟೆಯಲ್ಲಿ ಹಣ ಬಿಡುಗಡೆಯಾಗಲು ಸಹಾಯ ಮಾಡಿದ್ದು ಯಾರು? ಅದೆಲ್ಲಾ ಹೊರಗೆ ಬರಬೇಕು. ತೆಲಂಗಾಣದ ಚುನಾವಣೆಗೆ ಹೋಗಿರುವ ಹಣ ಇದು. ಅಲ್ಲಿಗೆ ಹೋಗಿ ಚುನಾವಣೆ ಉಸ್ತುವಾರಿ, ಜವಾಬ್ದಾರಿ ನಿರ್ವಹಿಸಿದವರು ಯಾರು? ಯಾರ ಪಾತ್ರ ಏನಿದೆ? ಎಲ್ಲವೂ ಹೊರಗೆ ಬರಬೇಕು. ವಾಲ್ಮೀಕಿ ನಿಗಮ ಹಣ ತೆಲಂಗಾಣಕ್ಕೆ ಹೋಗಿದೆ ಎನ್ನುವುದು ತನಿಖೆ ಬಳಿಕ ಗೊತ್ತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…