ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ದಾಖಲೆಯ ಗೆಲುವು ಸಾಧಿಸಿರುವ ಹೆಚ್ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗಲಿದೆಯಾ ಎಂಬುದರ ಕುರಿತು ಚರ್ಚೆಗಳು ಜೋರಾಗಿವೆ. ಈ ಕುರಿತ ಪ್ರಶ್ನೆ ಕುಮಾರಸ್ವಾಮಿಯವರಿಗೂ ಸಹ ಎದುರಾಗಿದ್ದು, ಅವರು ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ನಾಡಿನ ಜನತೆಯ ಸಮಸ್ಯೆಗೆ ಪರಿಹಾರ ನೀಡಬೇಕು. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಮಂತ್ರಿ ಸ್ಥಾನ ಅನಂತರದ ಮಾತು. ನನ್ನ ಕಡೆಯಿಂದ ಕೇಂದ್ರಕ್ಕೆ ಯಾವ ಮುಜುಗರವೂ ಇರುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇವೆ. ರಾಜ್ಯದ ಎಲ್ಲಾ ಸಂಸದರ ಜತೆ ಒಟ್ಟಾಗಿ ಕೆಲಸ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಡಿಕೆ ಹೇಳಿದ್ದಿಷ್ಟು
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯ ದೊಡ್ಡ ಗೆಲುವು ಜನರು ಕೊಟ್ಟ ತೀರ್ಪು. ಯಾವ ತಂತ್ರ ಕುತಂತ್ರದ ಮೂಲಕವೂ ಚುನಾವಣೆ ನಡೆಸಿಲ್ಲ. ಜನ ಗೆಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮಾರ್ಮಿಕವಾಗಿ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…