ರಾಜ್ಯ

ರಾಮನಗರ ಹೆಸರು ಬದಲಾವಣೆ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಹೊಸದಿಲ್ಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ ಅವರು; ಮುಂದೆ ಪರಿಸ್ಥಿತಿ ಬದಲಾಗಲಿದೆ. ಆಗ ಇವರು ಇಟ್ಟಿರುವ ಹೆಸರೂ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು.

2007 ರಲ್ಲಿ ನಾನು ತೀರ್ಮಾನ ಮಾಡುವಾಗ ಆಗ ವಿರೋಧ ಮಾಡಬಹುದಾಗಿತ್ತು ಆಗ ಮಾಡಲಿಲ್ಲ. ಈ ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ರಾಮನಗರ ಕೊಟ್ಟಿದೆ. ಇಡೀ ಜಗತ್ತೇ ನಿಬ್ಬೆರಗಾಗುವ ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿದ್ದರು. ನೆಹರು ಅವರಿಗೆ ಸಡ್ಡು ಹೊಡೆದು ರಾಜಕೀಯ ಮಾಡಿದ್ದರು. ಅಂತಹ ಮಹನೀಯರ ಹೆಸರನ್ನಾದರೂ ಜಿಲ್ಲೆಗೆ ಇಡಬಹುದಿತ್ತು. ಅವರ ಹೆಸರು ಇಟ್ಟಿದ್ದಿದ್ದರೆ ನಾನು ಅಭಿನಂದಿಸುತ್ತಿದ್ದೆ. ಕೆಂಗಲ್ ಅವರ ಹೆಸರಿಟ್ಟರೆ ಇವರ ಭೂಮಿಗಳಿಗೆ ಬೆಲೆ ಬರುವುದಿಲ್ಲವಲ್ಲ? ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ರಾಮನಗರ ಹೆಸರನ್ನು ತೆಗೆದುಹಾಕಿ ಬೆಂಗಳೂರು ದಕ್ಷಿಣ ಎಂದು ಹೆಸರು ಇಟ್ಟುಕೊಂಡಿರುವುದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಭೂಮಿಗಳ ಬೆಳೆಯನ್ನು ಏರಿಸುವ ಷಡ್ಯಂತ್ರದ ಭಾಗವಾಗಿದೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಅವರು ಏತಕ್ಕಾಗಿ ಜಿಲ್ಲೆಯ ಹೆಸರು ಬದಲಿಸಿದ್ದಾರೆ? ಅದರ ಹಿಂದಿನ ದುರುದ್ದೇಶ ಏನಿದೆ? ಎಂಬುದು ಗೊತ್ತಿದೆ. ಇದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಯಾವಾಗ ಅದಕ್ಕೆ ತಿರುಗಿಸಿ ಉತ್ತರ ಕೊಡಬೇಕೋ ಆಗ ಕೊಡುತ್ತೇನೆ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.

ಇಂತಹ ರಾಜಕಾರಣಕ್ಕೆ ನಾನು ಸೊಪ್ಪು ಹಾಕುವುದಿಲ್ಲ. ಇವರು ಕೇಂದ್ರ ಗೃಹ ಸಚಿವರಿಗೆ ಹೆಸರು ಬದಲಾವಣೆ ರಾಜ್ಯ ಸರ್ಕಾರ ಪ್ರಸ್ತಾಪ ಕಳಿಸಿದ್ದು, ಅದು ತಿರಸ್ಕೃತವಾಗಿದ್ದು ನನಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇವರು ಮಾಡಿದ್ದು ಮುಂದೆ ಬದಲಾಗಲಿದೆ ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ? ಇವರು ಮಾಡಿದ್ದು ಮುಂದೆ ಬದಲಾಗಲಿದೆ. ಅದೂ ನನಗೆ ಗೊತ್ತಿದೆ. ಹೇಳಿ ಕೇಳಿ ಈ ವ್ಯಕ್ತಿ ರಿಯಲ್ ಎಸ್ಟೇಟ್ ವ್ಯಾಪಾರಿ. ಏನೆಲ್ಲಾ ತಂತ್ರಗಾರಿಕೆ ಹೂಡಿದರೆ ತಮ್ಮ ಜಮೀನುಗಳಿಗೆ ಬೆಲೆ ಬರುತ್ತಿದೆ ಎನ್ನವುದು ಅವರಿಗೆ ಗೊತ್ತಿದೆ. ರಾಮನಗರ ಜಿಲ್ಲೆಯಾದಾಗಲೇ ರೈತರ ಭೂಮಿಗೆ ಬೆಲೆ ಬಂದಿರಲಿಲ್ಲವೇ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ನನ್ನ ಜಮೀನಿಗೆ ಬೆಲೆ ಬರುತ್ತದೆ ಎಂದು ಅವರು ಹೇಳಿದ್ದಾರೆ. ಆ ಜಮೀನನ್ನು ಕೂಡ ಕಿತ್ತುಕೊಳ್ಳಲು ಕುತಂತ್ರ ಮಾಡಿದ್ದಾರೆ ಇವರು. 40 ವರ್ಷಗಳ ಹಿಂದೆ ಖರೀದಿ ಮಾಡಿದ ಜಮೀನಿಗೆ ಎಸ್ಐಟಿ ಅಂತ ರಚನೆ ಮಾಡಿಕೊಂಡು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇದರ ವಿರುದ್ಧ ನಾನೂ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಹೇಳ್ದರು.

ಇವರು ನನ್ನ ವಿರುದ್ಧ ಕಿರುಕುಳ, ಕುತಂತ್ರ ಮಾಡುತ್ತಿದ್ದಾರೆ. ಹೀಗೆಯೇ ಅವರು ಮಾಡುತ್ತಿರಲಿ, ಇವರು ಲೂಟಿ ಹೊಡೆದಿರುವ ಶೇ.50ರಷ್ಟು ಸರ್ಕಾರಿ ಭೂಮಿಗಳಿವೆ. ಇವರು ಏನೆಲ್ಲಾ ಅನ್ಯಾಯ, ಅಕ್ರಮ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು? ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ನೀಡಲಾದ ಜಾಗ ನುಂಗಿದ್ದು ಯಾರು? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ದಲಿತರ ಭೂಮಿ ಕಬಳಿಸಿದವರನ್ನು ಸಿದ್ದರಾಮಯ್ಯ ಜತೆಯಲ್ಲಿ ಇಟ್ಟು ಕೊಂಡಿದ್ದಾರೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವಂದ್ವ ನೀತಿ ಬಗ್ಗೆ ಕಿಡಿಕಾರಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಿದ್ದಾರಾಮಯ್ಯ ಅವರು ತಾವು ಅಹಿಂದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ದುರಂತವೆಂದರೆ, ದಲಿತರ ಭೂಮಿ ಕಬಳಿಸಿದವರನ್ನೇ ತಮ್ಮ ಜತೆಯಲ್ಲಿ ಇಟ್ಟುಕೊಂಡಿದ್ದಾರೆ! ಈಗ ನೋಡಿದರೆ ಅವರು ಮುಖ್ಯಮಂತ್ರಿ ಆಗಬೇಕು ಎಂದು ಹೊರಟಿದ್ದಾರೆ. ಇದು ಈ ಸರ್ಕಾರದಲ್ಲಿ ನಡೆಯುತ್ತಿರುವ ದಲಿತ ವಿರೋಧಿ ನೀತಿ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 hour ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago