ರಾಜ್ಯ

ಲೋಕಸಮರ 2024: ಮಂಡ್ಯ ಕ್ಷೇತ್ರದಲ್ಲಿ ಮುನ್ನಡೆ ಬಗ್ಗೆ ಎಚ್‌ಡಿಕೆ ರಿಯಾಕ್ಷನ್‌

ಬೆಂಗಳೂರು: ಇಂದು ದೇಶದ 542 ಕೇತ್ರಗಳಿಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬುದು ಇಂದು ಸಂಜೆ ಒಳಗೆ ತಿಳಿಯಲಿದೆ.

ಇನ್ನು ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದಲ್ಲಿ ಹೈವೋಲ್ಟೇಜ್‌ ಕದನ ಕಣವಾಗಿರುವ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು 78 ಸಾವಿರ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಈ ಸಂಬಂಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂಡ್ಯದಲ್ಲಿ ಜನರು ಈ ಬಾರಿ ನನಗೆ ಆಶೀರ್ವಾದ ಮಾಡಲಿದ್ದಾರೆ. ಎಕ್ಸಿಟ್‌ ಪೋಲ್ಸ್‌ ಶೇ.90 ರಷ್ಟು ಸತ್ಯವಾಗಲಿದ್ದು, ಈ ಬಾರಿಯೂ ಬಿಜೆಪಿ ಅಧಿಕಾರ ಉಳಿಸಿಕೋಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಎನ್‌ಡಿಎ ಕನಿಷ್ಠ 25 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದರು.

ಇನ್ನು ಎನ್‌ಡಿಎ ಅಧಿಕಾರಕ್ಕೆ ಬಂದರೇ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ನನಗೆ ಯಾವುದೇ ಆಸಕ್ತಿಯಿಲ್ಲ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುತ್ತೇನೆ, ಕ್ಷೇತ್ರದ ಜನರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಕುಮಾರಣ್ಣ ಹೇಳಿದರು.

ಇನ್ನು ಮಂಡ್ಯ ಕ್ಷೇತ್ರದಲ್ಲಿ ಬೆಳಿಗ್ಗೆ 10.05 ರ ಸಮಯಕ್ಕೆ ಎಚ್‌ ಡಿ ಕುಮಾರಸ್ವಾಮಿ 218874 ಮತ ಪಡೆದರೇ, ಸ್ಟಾರ್‌ ಚಂದ್ರು 129935 ಮತ ಪಡೆದಿದ್ದಾರೆ. ಸ್ಟಾರ್‌ ಚಂದ್ರುಗಿಂತ ಕುಮಾರಣ್ಣ 88936 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

10 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

3 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

3 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

3 hours ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

4 hours ago