ಬೆಂಗಳೂರು: ಇಂದು ದೇಶದ 542 ಕೇತ್ರಗಳಿಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬುದು ಇಂದು ಸಂಜೆ ಒಳಗೆ ತಿಳಿಯಲಿದೆ.
ಇನ್ನು ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದಲ್ಲಿ ಹೈವೋಲ್ಟೇಜ್ ಕದನ ಕಣವಾಗಿರುವ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು 78 ಸಾವಿರ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಈ ಸಂಬಂಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂಡ್ಯದಲ್ಲಿ ಜನರು ಈ ಬಾರಿ ನನಗೆ ಆಶೀರ್ವಾದ ಮಾಡಲಿದ್ದಾರೆ. ಎಕ್ಸಿಟ್ ಪೋಲ್ಸ್ ಶೇ.90 ರಷ್ಟು ಸತ್ಯವಾಗಲಿದ್ದು, ಈ ಬಾರಿಯೂ ಬಿಜೆಪಿ ಅಧಿಕಾರ ಉಳಿಸಿಕೋಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಎನ್ಡಿಎ ಕನಿಷ್ಠ 25 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದರು.
ಇನ್ನು ಎನ್ಡಿಎ ಅಧಿಕಾರಕ್ಕೆ ಬಂದರೇ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ನನಗೆ ಯಾವುದೇ ಆಸಕ್ತಿಯಿಲ್ಲ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುತ್ತೇನೆ, ಕ್ಷೇತ್ರದ ಜನರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಕುಮಾರಣ್ಣ ಹೇಳಿದರು.
ಇನ್ನು ಮಂಡ್ಯ ಕ್ಷೇತ್ರದಲ್ಲಿ ಬೆಳಿಗ್ಗೆ 10.05 ರ ಸಮಯಕ್ಕೆ ಎಚ್ ಡಿ ಕುಮಾರಸ್ವಾಮಿ 218874 ಮತ ಪಡೆದರೇ, ಸ್ಟಾರ್ ಚಂದ್ರು 129935 ಮತ ಪಡೆದಿದ್ದಾರೆ. ಸ್ಟಾರ್ ಚಂದ್ರುಗಿಂತ ಕುಮಾರಣ್ಣ 88936 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ.
ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…