Mysore
18
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ಹೆಚ್‌ಡಿಕೆ

ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮೇಲಿನ ಸಿಟ್ಟಿನಿಂದ ಈ ರೀತಿ ಮಾಡಿಕೊಂಡು ಹೋಗುತ್ತಿದ್ದಾರೆ. ಜನರ ಮಧ್ಯೆ ನಾನೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738‌ ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್​ಗಳಲ್ಲಿ ಸಾಲ‌ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. ಆ ಒಪ್ಪಿಗೆಗೆ ಮಾತ್ರ ನಾನು ಆ ಫೈಲ್ ಕಳುಹಿಸಿದ್ದೇನೆ ಎಂದು ಹೇಳಿದರು.

Tags:
error: Content is protected !!