ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮೇಲಿನ ಸಿಟ್ಟಿನಿಂದ ಈ ರೀತಿ ಮಾಡಿಕೊಂಡು ಹೋಗುತ್ತಿದ್ದಾರೆ. ಜನರ ಮಧ್ಯೆ ನಾನೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738 ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್ಗಳಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. ಆ ಒಪ್ಪಿಗೆಗೆ ಮಾತ್ರ ನಾನು ಆ ಫೈಲ್ ಕಳುಹಿಸಿದ್ದೇನೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್ಪಾತ್ನಲ್ಲಿರುವ ಮ್ಯಾನ್ ಹೋಲ್ನಲ್ಲಿ ಕಸ…
ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…
ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…