ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮೇಲಿನ ಸಿಟ್ಟಿನಿಂದ ಈ ರೀತಿ ಮಾಡಿಕೊಂಡು ಹೋಗುತ್ತಿದ್ದಾರೆ. ಜನರ ಮಧ್ಯೆ ನಾನೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738 ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್ಗಳಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. ಆ ಒಪ್ಪಿಗೆಗೆ ಮಾತ್ರ ನಾನು ಆ ಫೈಲ್ ಕಳುಹಿಸಿದ್ದೇನೆ ಎಂದು ಹೇಳಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…