ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮೇಲಿನ ಸಿಟ್ಟಿನಿಂದ ಈ ರೀತಿ ಮಾಡಿಕೊಂಡು ಹೋಗುತ್ತಿದ್ದಾರೆ. ಜನರ ಮಧ್ಯೆ ನಾನೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738 ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್ಗಳಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. ಆ ಒಪ್ಪಿಗೆಗೆ ಮಾತ್ರ ನಾನು ಆ ಫೈಲ್ ಕಳುಹಿಸಿದ್ದೇನೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…