ರಾಜ್ಯ

ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಎಚ್‌ಡಿಕೆ

ಬೆಂಗಳೂರು: ಹಾಸನ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು.

ಎಚ್‌ಡಿಕೆ ನೇತೃತ್ವದ ನಿಯೋಗ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರನ್ನು ಭೇಟಿಯಾಗಿ ಪೆನ್‌ಡ್ರೈವ್‌ ಪ್ರಕರಣದಲ್ಲಿ ನ್ಯಾಯ ಕೊಡಿಸಿಕೊಡುವಂತೆ ಮನವಿ ಮಾಡಿತು.

ನಂತರ ಮಾಧ್ಯಮಗೋಷ್ಠೀ ನಡೆಸಿ ಮಾತನಾಡಿದ ಎಚ್‌ಡಿಕೆ, ಎಚ್‌ಡಿ ರೇವಣ್ಣ ವಿಚಾರದಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿಯೂ ಕೂಡಾ ಈವರೆಗೆ ಯಾಕೆ ಯಾವುದೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಲ್ಲ ಎಂದು ಕಿಡಿಕಾರಿದರು.

ಪ್ರಜ್ವಲ್‌ ಹಾಗೂ ರೇವಣ್ಣ ಪ್ರಕರಣ ದಾರಿ ತಪ್ಪುತ್ತಿದೆ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಅದು ಯಾರೇ ಆಗುದ್ದರೂ ಸಹಾ. ಇವರ ತನಿಖೆ ಮಾಡುತ್ತಿರುವುದನ್ನು ನೋಡಿದರೇ ಇವರ ಉದ್ದೇಶ ತಿಳಿಯುತ್ತದೆ. ತನಿಖೆ ಆರಂಭವಾದಾಗಿನಿಂದಲೂ ಮಂದಗತಿಯಿಂದಲೇ ತನಿಖೆ ಸಾಗುತ್ತಿದೆ. ಹೀಗಾಗಿ ರಾಜ್ಯಪಾಲರಿಗೆ ದೂರು ನೀಡುತ್ತಿದ್ದೇವೆ ಎಂದರು.

ಕೃಷ್ಣ ಭೈರೇಗೌಡರ ಹೇಳಿಕೆಯನ್ನು ಪ್ರಸ್ತಾಪಿಸಿ, ಕೃಷ್ಣೇ ಭೈರೇಗೌಡರು ರಾಜ್ಯದಲ್ಲಿ ಮಾನಹರಣ ಶೀಲಾಹರಣ ಪದಗಳನ್ನು ಬಳಿಸಿದ್ದೀರಿ. ನೂರಾರು ಮಹಿಳೆಯರ ಮಾನ ಹಾನಿಯಾಗಿದೆ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ. ಎಚ್‌ಡಿಕೆ ಪೆನ್‌ಡ್ರೈವ್‌ ಜೇಬಿನಲ್ಲಿದೆ ಎಂದು ಹೇಳುತ್ತಾರೆ. ನಾನು ಇಂತಹ ಪೆನ್‌ಡ್ರೈವ್‌ ಬಿಡುತ್ತೇನೆ. ಇದರ ಮೇಲೆ ಕ್ರಮ ಜರುಗಿಸುವದಾದರೇ ಈ ಪೆನ್‌ ಡ್ರೈವ್‌ ಕೊಡುತ್ತೇನೆ ಎಂದು ನಿಮ್ಮ ಸಿಎಂ ಹಾಗೂ ಸ್ಪೀಕರ್‌ ಅವರಿಗೆ ಹೇಳಿದೆ. ವರ್ಗಾವಣೆ ದಂಧೆ ಸೇರಿದಂತೆ ಸಿಎಸ್‌ಆರ್‌ ಫಂಡ್‌ ಎಲ್ಲಾ ಡಾಕ್ಯೂಮೆಂಟ್‌ ಪೆನ್‌ಡ್ರೈವ್‌ ಇರುವುದು ನನ್ನ ಬಳಿ, ನಿಮ್ಮ ಬಳಿಯಿರುವ ಅಶ್ಲೀಲ ಪೆನ್‌ಡ್ರೈವ್‌ ಅಲ್ಲ ಎಂದಿದ್ದಾರೆ.

ಇನ್ನು ಡಿಕೆಶಿ ಅವರನ್ನು ಎಚ್‌ಡಿ ಕುಮಾರಸ್ವಾಮಿ ಅವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್‌ ಅವರ ಕಥೆಗೆ ನಾನೇ ನಾಯಕನಾಗಬೇಕು. ಅವರ ಕಥೆಗೆ ನನ್ನನ್ನು ನಾಯಕನನ್ನಾಗಿ ಒಪ್ಪಿಕೊಂಡಿದ್ದಾರೆ. ಅದು ನನಗೆ ಸಂತೋಷ ನೀಡಿದೆ ಎಂದು ಎಚ್ಡಿಕೆ ಕುಹಕವಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago