ಬೆಂಗಳೂರು: ಇಂದು (ಜೂನ್.9, ಭಾನುವಾರ) ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಂಭಾವ್ಯ ಕೇಂದ್ರ ಸಚಿವರ ಪ್ರಮಾಣವಚನ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಹೆಸರು ಕೇಳಿಬಂದಿದೆ.
ಇತ್ತ ಇಡೀ ದೇವೇಗೌಡರ ಕುಟುಂಬ ದಹಲಿಯಲ್ಲಿ ಬೀಡುಬಿಟ್ಟಿದ್ದು, ತಾವು ಕೇಂದ್ರ ಸಚಿವರಾಗುವ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.
ಇದು ನನ್ನ ಗೆಲುವಲ್ಲ ಕರ್ನಾಟಕದ ಗೆಲುವು. ನರೇಂದ್ರ ಮೋದಿ ಅವರ ಜತೆಯಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಈ ಅವಕಾಶ ನೀಡಿದ ಮಂಡ್ಯ ಜನತೆಗೆ ನನ್ನ ಧನ್ಯವಾದಗಳು.
ನನಗೆ ಮಂತ್ರಿ ಸ್ಥಾನ ಸಿಕ್ಕರೇ ಜನರ ಪರವಾಗಿ ಕೆಲಸ ಮಾಡುತ್ತೇನೆ. ಕೃಷಿ ಸಚಿವ ಖಾತೆ ಸಿಕ್ಕರೇ ಬಹಳ ಸಂತೋಷ. ರೈತರ ಪರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಂತಾಗುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇನ್ನು ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಜೆಡಿಎಸ್ಗೆ ಪುನಶ್ಚೇತನ ಸಿಕ್ಕಿದೆ, ಕರ್ನಾಟಕದ ಜನತೆಗೆ ಪುನಶ್ಚೇತನ ಸಿಕ್ಕಂತಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…