ರಾಜ್ಯ

ಕಲ್ಲೊಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ; ಡಿಕೆ ಸುರೇಶ್‌ಗೆ ಹೆಚ್‌ಡಿಕೆ ಟಾಂಗ್‌

ಡಿಕೆ ಸುರೇಶ್‌ ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳಿಗೆ ಸರಿಯಾಗಿ ಹಣ ನೀಡುತ್ತಿಲ್ಲ, ಇದರಿಂದ ಪ್ರತ್ಯೇಕ ರಾಷ್ಟ್ರದ ದನಿ ಎತ್ತಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ನೀಡಿದ್ದ ಹೇಳಿಕೆಗೆ ಸದ್ಯ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವತಃ ಕಾಂಗ್ರೆಸ್‌ ಪಕ್ಷದ ನಾಯಕರೇ ಡಿಕೆ ಸುರೇಶ್‌ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದು, ಇನ್ನುಳಿದ ಪಕ್ಷಗಳ ನಾಯಕರೂ ಸಹ ಚಾಟಿ ಬೀಸಿದ್ದಾರೆ. ಯಾವ ನಾಯಕರು ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಹೆಚ್‌ಡಿ ಕುಮಾರಸ್ವಾಮಿ: ಕಲ್ಲೊಡೆದುಕೊಂಡು ಇದ್ದವರನ್ನು ಲೋಕಸಭೆಗೆ ಆರಿಸಿ ಕಳುಹಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕಷ್ಟು ಗುಡ್ಡೆ ಮಾಡಿದ್ದಾರೆ. ಅಂತಹವರನ್ನು ದೇಶ ಕಟ್ಟಲು ಲೋಕಸಭೆಗೆ ಕಳುಹಿಸಿದರೆ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಸುರೇಶ್‌ ಅವರ ಹೇಳಿಕೆ ಬಾಲಿಶವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ: ʼಪ್ರತ್ಯೇಕ ದೇಶ ಕೇಳೋಕೆ ಆಗಲ್ಲ. ದೇಶ ಸಾರ್ವಭೌಮತೆ ಇರಬೇಕು. ನಮ್ಮದು ಫೆಡರಿಸಂ ದೇಶ. ನಮಗೆ ಸಿಗಬೇಕಾದ ಪಾಲು ಸಿಗುತ್ತಿಲ್ಲ. ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡುತ್ತೆ. ಆದರೂ ನಮಗೆ ಅನ್ಯಾಯ ಆಗುತ್ತಿದೆ. ಅಖಂಡ ಭಾರತವಾಗಿಯೇ ಇರಬೇಕು. ದಕ್ಷಿಣ ಭಾರತ, ಉತ್ತರ ಭಾರತ ಅಂತ ಇರಬಾರದು. ಅಖಂಡ ಭಾರತವಾಗಿಯೇ ಇರಬೇಕು. ಅಖಂಡ ಕರ್ನಾಟಕವಾಗಿಯೇ ಕರ್ನಾಟಕ ಇರಬೇಕುʼ ಎಂದು ಹೇಳಿದರು.

ಡಿಕೆ ಶಿವಕುಮಾರ್: ನಮ್ಮದು ಅಖಂಡ ಭಾರತ, ನಾನು ಪ್ರತ್ಯೇಕ ದೇಶ ಬೇಡಿಕೆ ಒಪ್ಪುವುದಿಲ್ಲ. ನಮ್ಮದು ಅಖಂಡ ಭಾರತ. ಹೀಗಾಗಿ ಅಖಂಡ ಭಾರತ ಇರಬೇಕು. ಆದರೆ ಡಿ.ಕೆ. ಸುರೇಶ್ ಅವರು ಹೇಳಿರುವುದು ಆ ಅರ್ಥದಲ್ಲಿ ಅಲ್ಲ ಎಂದರು.

andolana

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

2 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

2 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

2 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

3 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

3 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

3 hours ago