ರಾಜ್ಯ

ಕಲ್ಲೊಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ; ಡಿಕೆ ಸುರೇಶ್‌ಗೆ ಹೆಚ್‌ಡಿಕೆ ಟಾಂಗ್‌

ಡಿಕೆ ಸುರೇಶ್‌ ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳಿಗೆ ಸರಿಯಾಗಿ ಹಣ ನೀಡುತ್ತಿಲ್ಲ, ಇದರಿಂದ ಪ್ರತ್ಯೇಕ ರಾಷ್ಟ್ರದ ದನಿ ಎತ್ತಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ನೀಡಿದ್ದ ಹೇಳಿಕೆಗೆ ಸದ್ಯ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವತಃ ಕಾಂಗ್ರೆಸ್‌ ಪಕ್ಷದ ನಾಯಕರೇ ಡಿಕೆ ಸುರೇಶ್‌ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದು, ಇನ್ನುಳಿದ ಪಕ್ಷಗಳ ನಾಯಕರೂ ಸಹ ಚಾಟಿ ಬೀಸಿದ್ದಾರೆ. ಯಾವ ನಾಯಕರು ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಹೆಚ್‌ಡಿ ಕುಮಾರಸ್ವಾಮಿ: ಕಲ್ಲೊಡೆದುಕೊಂಡು ಇದ್ದವರನ್ನು ಲೋಕಸಭೆಗೆ ಆರಿಸಿ ಕಳುಹಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕಷ್ಟು ಗುಡ್ಡೆ ಮಾಡಿದ್ದಾರೆ. ಅಂತಹವರನ್ನು ದೇಶ ಕಟ್ಟಲು ಲೋಕಸಭೆಗೆ ಕಳುಹಿಸಿದರೆ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಸುರೇಶ್‌ ಅವರ ಹೇಳಿಕೆ ಬಾಲಿಶವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ: ʼಪ್ರತ್ಯೇಕ ದೇಶ ಕೇಳೋಕೆ ಆಗಲ್ಲ. ದೇಶ ಸಾರ್ವಭೌಮತೆ ಇರಬೇಕು. ನಮ್ಮದು ಫೆಡರಿಸಂ ದೇಶ. ನಮಗೆ ಸಿಗಬೇಕಾದ ಪಾಲು ಸಿಗುತ್ತಿಲ್ಲ. ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡುತ್ತೆ. ಆದರೂ ನಮಗೆ ಅನ್ಯಾಯ ಆಗುತ್ತಿದೆ. ಅಖಂಡ ಭಾರತವಾಗಿಯೇ ಇರಬೇಕು. ದಕ್ಷಿಣ ಭಾರತ, ಉತ್ತರ ಭಾರತ ಅಂತ ಇರಬಾರದು. ಅಖಂಡ ಭಾರತವಾಗಿಯೇ ಇರಬೇಕು. ಅಖಂಡ ಕರ್ನಾಟಕವಾಗಿಯೇ ಕರ್ನಾಟಕ ಇರಬೇಕುʼ ಎಂದು ಹೇಳಿದರು.

ಡಿಕೆ ಶಿವಕುಮಾರ್: ನಮ್ಮದು ಅಖಂಡ ಭಾರತ, ನಾನು ಪ್ರತ್ಯೇಕ ದೇಶ ಬೇಡಿಕೆ ಒಪ್ಪುವುದಿಲ್ಲ. ನಮ್ಮದು ಅಖಂಡ ಭಾರತ. ಹೀಗಾಗಿ ಅಖಂಡ ಭಾರತ ಇರಬೇಕು. ಆದರೆ ಡಿ.ಕೆ. ಸುರೇಶ್ ಅವರು ಹೇಳಿರುವುದು ಆ ಅರ್ಥದಲ್ಲಿ ಅಲ್ಲ ಎಂದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago