ರಾಜ್ಯ

KRS ಸೇರಿ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆ ಮಾಡುವಂತೆ ಎಚ್.ಡಿ.ಕುಮಾರಸ್ವಾಮಿ ಸಲಹೆ

ಮಂಡ್ಯ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು. ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದು ಹೇಳಿದರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.
ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.
ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುತಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

26 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

3 hours ago