ರಾಜ್ಯ

ಮಂಡ್ಯ ಸಂಸದರಾಗಿ ಎಚ್‌ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್‌.24) ಆರಂಭಗೊಂಡಿದ್ದು, ಲೋಕಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.

ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಮಾತೃಭಾಷೆಯಾದ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದು, ವಿಶೇಷವಾಗಿತ್ತು.

ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭರ್ತೃಹರಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ಸಂಸತ್‌ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಾರಣಾಸಿ ಕ್ಷೇತ್ರದ ಸಂಸದರಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರು.

ಅಧಿವೇಶನದ ಮೊದಲ ದಿನವಾದ ಇಂದು 280 ಮಂದಿ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದು, ಇದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಎಚ್‌.ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಎಚ್‌ಡಿಕೆ ಅವರು ಪ್ರಮಾಣವಚನ ಸ್ವೀಕರಿಸಿದ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ.

ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಮಂಡ್ಯ ಜನತೆಗೆ ಎಚ್‌.ಡಿ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

7 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

8 hours ago