ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ನೇರ ಹೊಣೆ: ಎಚ್‌ಡಿಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು.

ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು ಬಹುದೊಡ್ಡ ಅಕ್ರಮ. ಸಿಎಂ ಸೇರಿದಂತೆ ಇಡೀ ಸಂಪುಟವೇ ಶಾಮೀಲಾಗಿದೆ ಎಂದು ಅವರು ನೇರ ಆರೋಪ ಮಾಡಿದರು.

ಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಾತ್ರ ಹಣ ವರ್ಗಾವಣೆ ಆಗಿರಲು ಸಾಧ್ಯವಿಲ್ಲ. ಬೇರೆ ಬೇರೆ ಇಲಾಖೆಗಳ ನಿಗಮ ಮಂಡಳಿಗಳ ಖಾತೆಗಳಿಂದ ಹಣ ವರ್ಗ ಆಗಿರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೆ ರಾಜ್ಯದಿಂದ ಯಾರೆಲ್ಲ ಉಸ್ತುವಾರಿಗಳು ಇದ್ದರು? ಅದನ್ನೆಲ್ಲ ಗಮನಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಹಗರಣಕ್ಕೆ ಸಂಬಂಧಿಸಿ 14 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಆ ಖಾತೆಗಳನ್ನು ತೆರೆದವರು ಯಾರು? ಯಾವೆಲ್ಲ ಕಾಣದ ಕೈಗಳು ಇವುಗಳ ಹಿಂದೆ ಇವೆ? ಎಲ್ಲಾ ಹೊರಗೆ ಬರಬೇಕು ಅಲ್ಲವೇ? ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಎಲ್ಲಾ ನಿಗಮ ಮಂಡಳಿಗಳ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆದರೆ ಇನ್ನೆಷ್ಟು ಅಕ್ರಮಗಳು ಹೊರಗೆ ಬರುತ್ತವೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಹಣಕಾಸಿನ ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಇದಕ್ಕೆಲ್ಲ ನೇರ ಜವಾಬ್ದಾರಿ ಹೊರಬೇಕು. ಹಗರಣದ ತನಿಖೆ ಬಗ್ಗೆ ಆಮೆ ವೇಗ! ಆದರೆ ಹಣ ವರ್ಗಾವಣೆ ಮಾಡಿಕೊಳ್ಳಲು ರಾಕೆಟ್ ವೇಗ!! ಇದು ಇವರ ಕಾರ್ಯವೈಖರಿ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇಷ್ಟು ಮೊತ್ತದ ಹಣವನ್ನು ಯಾರ ನಿರ್ದೇಶನದ ಮೇರೆಗೆ ಮಾಡಿದ್ದರು. ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಇದೆಲ್ಲಾ ಚರ್ಚೆ ನಡೆದು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಜನರ ತೆರಿಗೆ ಹಣ, ಅವರ ಬೆವರಿನ ಹಣ. ಜನರ ದುಡ್ಡನ್ನು ಇಷ್ಟು ಸ್ವೇಚ್ಚಾಚಾರವಾಗಿ ಬಳಕೆ ಮಾಡಿಕೊಂಡಿದ್ದಾರೆ. ನಿಮಗೆ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ? ಬಡವರ ದುಡ್ಡನ್ನೇ ಕೊಳ್ಳೆ ಹೊಡೆಯೋದು, ಅವರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ನಾಟಕ ಆಡೋದು. ಇದು ಯಾವ ಸೀಮೆ ಅಭಿವೃದ್ಧಿ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಹಳ ಮಾತಾನಾಡುತ್ತಾರೆ. ಪ್ರತಿಯೊಂದಕ್ಕೂ ಮುಂದೆ ಬಂದು ಹೇಳಿಕೆ ಕೊಡುತ್ತಾರೆ. ಇದಕ್ಕೂ ಅವರು ಉತ್ತರ ಕೊಡಲಿ. ಯಾರಪ್ಪನ ಮನೆಯ ದುಡ್ಡು ಇದು? ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಇರುವ ಹಣವನ್ನು ಹೀಗೆ ಲೂಟಿ ಮಾಡುತ್ತೀರಿ!! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಈಗ ಎಸ್ ಐಟಿ ರಚನೆ ಮಾಡಿ ಯಾರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಇವರು? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ಸಚಿವ ನಾಗೇಂದ್ರ ಹೆಸರನ್ನೂ ಬರೆದಿಲ್ಲ. 36 ಜನ ಸಚಿವರಿದ್ದಾರೆ, ನಾವು ಯಾರೂ ಅಂತ ಅಂದುಕೊಳ್ಳಬೇಕು ಹಲವಾರು ನಿಗಮ ಮಂಡಳಿಗಳಲ್ಲಿ ಹೀಗೆ ಆಗುತ್ತಿದೆ. ಎಲ್ಲವೂ ತನಿಖೆ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.

ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್ ಐಟಿ ರಚನೆ ಮಾಡಿದೆ. ಎಸ್ ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನೆ ಡ್ರೈವ್ ತೆಗೆದುಕೊಂಡು ತೆಗೆದುಕೊಂಡು ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಯಾಕೋ.. ಈ ಬಾರಿ ಪೆನ್ ಡ್ರೈ ಹೆಚ್ಚು ಸದ್ದು ಮಾಡುತ್ತಿದೆ ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago