ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ನೇರ ಹೊಣೆ: ಎಚ್‌ಡಿಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು.

ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು ಬಹುದೊಡ್ಡ ಅಕ್ರಮ. ಸಿಎಂ ಸೇರಿದಂತೆ ಇಡೀ ಸಂಪುಟವೇ ಶಾಮೀಲಾಗಿದೆ ಎಂದು ಅವರು ನೇರ ಆರೋಪ ಮಾಡಿದರು.

ಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಾತ್ರ ಹಣ ವರ್ಗಾವಣೆ ಆಗಿರಲು ಸಾಧ್ಯವಿಲ್ಲ. ಬೇರೆ ಬೇರೆ ಇಲಾಖೆಗಳ ನಿಗಮ ಮಂಡಳಿಗಳ ಖಾತೆಗಳಿಂದ ಹಣ ವರ್ಗ ಆಗಿರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೆ ರಾಜ್ಯದಿಂದ ಯಾರೆಲ್ಲ ಉಸ್ತುವಾರಿಗಳು ಇದ್ದರು? ಅದನ್ನೆಲ್ಲ ಗಮನಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಹಗರಣಕ್ಕೆ ಸಂಬಂಧಿಸಿ 14 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಆ ಖಾತೆಗಳನ್ನು ತೆರೆದವರು ಯಾರು? ಯಾವೆಲ್ಲ ಕಾಣದ ಕೈಗಳು ಇವುಗಳ ಹಿಂದೆ ಇವೆ? ಎಲ್ಲಾ ಹೊರಗೆ ಬರಬೇಕು ಅಲ್ಲವೇ? ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಎಲ್ಲಾ ನಿಗಮ ಮಂಡಳಿಗಳ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆದರೆ ಇನ್ನೆಷ್ಟು ಅಕ್ರಮಗಳು ಹೊರಗೆ ಬರುತ್ತವೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಹಣಕಾಸಿನ ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಇದಕ್ಕೆಲ್ಲ ನೇರ ಜವಾಬ್ದಾರಿ ಹೊರಬೇಕು. ಹಗರಣದ ತನಿಖೆ ಬಗ್ಗೆ ಆಮೆ ವೇಗ! ಆದರೆ ಹಣ ವರ್ಗಾವಣೆ ಮಾಡಿಕೊಳ್ಳಲು ರಾಕೆಟ್ ವೇಗ!! ಇದು ಇವರ ಕಾರ್ಯವೈಖರಿ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇಷ್ಟು ಮೊತ್ತದ ಹಣವನ್ನು ಯಾರ ನಿರ್ದೇಶನದ ಮೇರೆಗೆ ಮಾಡಿದ್ದರು. ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಇದೆಲ್ಲಾ ಚರ್ಚೆ ನಡೆದು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಜನರ ತೆರಿಗೆ ಹಣ, ಅವರ ಬೆವರಿನ ಹಣ. ಜನರ ದುಡ್ಡನ್ನು ಇಷ್ಟು ಸ್ವೇಚ್ಚಾಚಾರವಾಗಿ ಬಳಕೆ ಮಾಡಿಕೊಂಡಿದ್ದಾರೆ. ನಿಮಗೆ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ? ಬಡವರ ದುಡ್ಡನ್ನೇ ಕೊಳ್ಳೆ ಹೊಡೆಯೋದು, ಅವರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ನಾಟಕ ಆಡೋದು. ಇದು ಯಾವ ಸೀಮೆ ಅಭಿವೃದ್ಧಿ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಹಳ ಮಾತಾನಾಡುತ್ತಾರೆ. ಪ್ರತಿಯೊಂದಕ್ಕೂ ಮುಂದೆ ಬಂದು ಹೇಳಿಕೆ ಕೊಡುತ್ತಾರೆ. ಇದಕ್ಕೂ ಅವರು ಉತ್ತರ ಕೊಡಲಿ. ಯಾರಪ್ಪನ ಮನೆಯ ದುಡ್ಡು ಇದು? ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಇರುವ ಹಣವನ್ನು ಹೀಗೆ ಲೂಟಿ ಮಾಡುತ್ತೀರಿ!! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಈಗ ಎಸ್ ಐಟಿ ರಚನೆ ಮಾಡಿ ಯಾರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಇವರು? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ಸಚಿವ ನಾಗೇಂದ್ರ ಹೆಸರನ್ನೂ ಬರೆದಿಲ್ಲ. 36 ಜನ ಸಚಿವರಿದ್ದಾರೆ, ನಾವು ಯಾರೂ ಅಂತ ಅಂದುಕೊಳ್ಳಬೇಕು ಹಲವಾರು ನಿಗಮ ಮಂಡಳಿಗಳಲ್ಲಿ ಹೀಗೆ ಆಗುತ್ತಿದೆ. ಎಲ್ಲವೂ ತನಿಖೆ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.

ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್ ಐಟಿ ರಚನೆ ಮಾಡಿದೆ. ಎಸ್ ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನೆ ಡ್ರೈವ್ ತೆಗೆದುಕೊಂಡು ತೆಗೆದುಕೊಂಡು ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಯಾಕೋ.. ಈ ಬಾರಿ ಪೆನ್ ಡ್ರೈ ಹೆಚ್ಚು ಸದ್ದು ಮಾಡುತ್ತಿದೆ ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

10 hours ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

11 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

12 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

13 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

14 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

15 hours ago