ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇಂದು ಎಚ್.ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸಿದರು. ಈ ವೇಳೆ ಬೆಂಗಳೂರಿನ ವಿಮಾನನಿಲ್ದಾಣದ ಬಳಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ, ಸಂಸದ ಮಲ್ಲೇಶ್ ಬಾಬು, ನಿಸರ್ಗ ನಾರಾಯಣಸ್ವಾಮಿ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಬೃಹತ್ ಗಾತ್ರದ ಸೇಬಿನಹಣ್ಣು, ಮೂಸಂಬಿ ಹಾರ ಹಾಕಿ ಸ್ವಾಗತ ಕೋರಿ ಅಭಿನಂಧಿಸಿದರು.
ಅಭಿನಂದನೆ ಸ್ವೀಕರಿಸಿ ಬಳಿಕ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾಗಿ ನನ್ನ ಕರ್ಮ ಭೂಮಿಗೆ ಆಗಮಿಸಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು. ವಿಶೇಷವಾಗಿ ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಅಭಿನಂದನೆ ಎಂದು ಹೇಳಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…