ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಹೊಳೆ ನರಸೀಪುರ ಶಾಸಕ ಎಚ್.ಡಿ ರೇವಣ್ಣ ಸೋಮವಾರ (ಜೂನ್.17) ಎಸ್ಐಟಿ ತನಿಖಾಧಿಕಾರಿಗಳ ಎದುರು ಹಾಜರಾದರು.
ಕಚೇರಿಗೆ ಬಂದ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದರು. ತನಿಖೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗಿದ್ದು, ಅವರು ನೀಡಿದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು ಜಿಲ್ಲೆಯ ಕೆ.ಆರ್ ನಗರ ಠಾಣೆಯಲ್ಲಿ ಶಾಸಕ ಎಚ್.ಡಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮೇ.4 ರಂದು ಬಂಧಿಸಲಾಗಿತ್ತು. ಮರು ದಿನವೇ ನ್ಯಾಯಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿತ್ತು. ಇದಾದ ಬಳಿಕ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದಿದು, ಸೋಮವಾರ ಎಸ್ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…