ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಹೊಳೆ ನರಸೀಪುರ ಶಾಸಕ ಎಚ್.ಡಿ ರೇವಣ್ಣ ಸೋಮವಾರ (ಜೂನ್.17) ಎಸ್ಐಟಿ ತನಿಖಾಧಿಕಾರಿಗಳ ಎದುರು ಹಾಜರಾದರು.
ಕಚೇರಿಗೆ ಬಂದ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದರು. ತನಿಖೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗಿದ್ದು, ಅವರು ನೀಡಿದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು ಜಿಲ್ಲೆಯ ಕೆ.ಆರ್ ನಗರ ಠಾಣೆಯಲ್ಲಿ ಶಾಸಕ ಎಚ್.ಡಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮೇ.4 ರಂದು ಬಂಧಿಸಲಾಗಿತ್ತು. ಮರು ದಿನವೇ ನ್ಯಾಯಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿತ್ತು. ಇದಾದ ಬಳಿಕ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದಿದು, ಸೋಮವಾರ ಎಸ್ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…