ರಾಜ್ಯ

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ; ಎಚ್ ಡಿ ರೇವಣ್ಣ ‌

ಬೆಂಗಳೂರು : ನನ್ನ ಮಗ ಪ್ರಜ್ವಲ್‌ ರೇವಣ್ಣ  ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣ ಹೇಳಿದರು.

ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ಹಗರಣ ಸದ್ದು ಮಾಡಿದೆ ಜೊತೆಗೆ ವಾದ ವಿವಾದಗಳು ಕೂಡ ಮುಂದುವರೆಯಿತು. ಈ ಬೆನ್ನಲ್ಲೆ ವಿಧಾನಸಭೆಯಲ್ಲಿ ಶಾಸಕ ಎಚ್‌ ಡಿ ರೇವಣ್ಣ ಮಾತನಾಡಿ, ನನ್ನ ಮೇಲೆ ಯಾರೋ ಆರೋಪ ಮಾಡಿದ್ದಾರೆ. ಹೆಣ್ಣು ಮಗಳನ್ನ ಕರೆದುಕೊಂಡು ಬಂದ ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ ಎಂದು  ರೇವಣ್ಣ ಪ್ರಶ್ನೆ ಮಾಡಿದರು.

ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೋಟಿಸ್‌ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಇನ್ನು ಶಾಸಕ ಎಚ್‌ ಡಿ ರೇವಣ್ಣ ಬಂಧನದ ಬಗ್ಗೆ ಆರ್‌ ಅಶೋಕ್‌ ಕೂಡ ಸದನದಲ್ಲಿ ಉಲ್ಲೇಖಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪ ಮಾಡುವ ವೇಳೆ, ವಾಲ್ಮೀಕಿ ಕೇಸ್‌ ನಲ್ಲಿ ನೋಟಿಸ್‌ ಕೊಟ್ಟು ಕರೆದೇ ಇಲ್ಲ. ಆದರೆ ರೇವಣ್ಣ, ಭವಾನಿ ರೇವಣ್ಣ ಪ್ರಕರಣದಲ್ಲಿ ಎಸ್‌ ಐಟಿ ತುಂಬಾ ಸ್ಟ್ರಾಂಗ್‌ ಇದ್ರು, ಎಷ್ಟು ಸ್ಟ್ರಾಂಗ್‌ ಅಂದರೆ ಎರಡೇ ದಿನದಲ್ಲಿ ಅರೆಸ್ಟ್‌ ಮಾಡಿದರು. ಮಾಜಿ ಶಾಸಕ ಪ್ರೀತಂಗೌಡ ಕೇಸ್‌ ನಲ್ಲೂ ಹಾಗೆ ಆಯಿತು. ವಾಲ್ಮೀಕಿ ನಿಗಮ ಕೇಸ್ ನಲ್ಲಿ ಇನ್ನೂ ನೋಟಿಸ್‌ ಸಹ ಕೊಟ್ಟಿಲ್ಲ. ಎಸ್‌ ಐಟಿ ಕಚೇರಿಯಲ್ಲಿ ೮ ಗಂಟೆಗಳ ಕಾಲ ಕೂರಿಸಿದ್ದರು. ಏನು ವಾಲ್ಮೀಕಿ ರಾಮಾಯಣ ಓದಲು ಕೂರಿಸಿದ್ದರಾ ಎಂದು ವಿಧಾನಸಭೆಯಲ್ಲಿ ಅಶೋಕ್ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

5 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

24 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

1 hour ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

1 hour ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

2 hours ago