ರಾಜ್ಯ

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ; ಎಚ್ ಡಿ ರೇವಣ್ಣ ‌

ಬೆಂಗಳೂರು : ನನ್ನ ಮಗ ಪ್ರಜ್ವಲ್‌ ರೇವಣ್ಣ  ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣ ಹೇಳಿದರು.

ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ಹಗರಣ ಸದ್ದು ಮಾಡಿದೆ ಜೊತೆಗೆ ವಾದ ವಿವಾದಗಳು ಕೂಡ ಮುಂದುವರೆಯಿತು. ಈ ಬೆನ್ನಲ್ಲೆ ವಿಧಾನಸಭೆಯಲ್ಲಿ ಶಾಸಕ ಎಚ್‌ ಡಿ ರೇವಣ್ಣ ಮಾತನಾಡಿ, ನನ್ನ ಮೇಲೆ ಯಾರೋ ಆರೋಪ ಮಾಡಿದ್ದಾರೆ. ಹೆಣ್ಣು ಮಗಳನ್ನ ಕರೆದುಕೊಂಡು ಬಂದ ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ ಎಂದು  ರೇವಣ್ಣ ಪ್ರಶ್ನೆ ಮಾಡಿದರು.

ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೋಟಿಸ್‌ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಇನ್ನು ಶಾಸಕ ಎಚ್‌ ಡಿ ರೇವಣ್ಣ ಬಂಧನದ ಬಗ್ಗೆ ಆರ್‌ ಅಶೋಕ್‌ ಕೂಡ ಸದನದಲ್ಲಿ ಉಲ್ಲೇಖಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪ ಮಾಡುವ ವೇಳೆ, ವಾಲ್ಮೀಕಿ ಕೇಸ್‌ ನಲ್ಲಿ ನೋಟಿಸ್‌ ಕೊಟ್ಟು ಕರೆದೇ ಇಲ್ಲ. ಆದರೆ ರೇವಣ್ಣ, ಭವಾನಿ ರೇವಣ್ಣ ಪ್ರಕರಣದಲ್ಲಿ ಎಸ್‌ ಐಟಿ ತುಂಬಾ ಸ್ಟ್ರಾಂಗ್‌ ಇದ್ರು, ಎಷ್ಟು ಸ್ಟ್ರಾಂಗ್‌ ಅಂದರೆ ಎರಡೇ ದಿನದಲ್ಲಿ ಅರೆಸ್ಟ್‌ ಮಾಡಿದರು. ಮಾಜಿ ಶಾಸಕ ಪ್ರೀತಂಗೌಡ ಕೇಸ್‌ ನಲ್ಲೂ ಹಾಗೆ ಆಯಿತು. ವಾಲ್ಮೀಕಿ ನಿಗಮ ಕೇಸ್ ನಲ್ಲಿ ಇನ್ನೂ ನೋಟಿಸ್‌ ಸಹ ಕೊಟ್ಟಿಲ್ಲ. ಎಸ್‌ ಐಟಿ ಕಚೇರಿಯಲ್ಲಿ ೮ ಗಂಟೆಗಳ ಕಾಲ ಕೂರಿಸಿದ್ದರು. ಏನು ವಾಲ್ಮೀಕಿ ರಾಮಾಯಣ ಓದಲು ಕೂರಿಸಿದ್ದರಾ ಎಂದು ವಿಧಾನಸಭೆಯಲ್ಲಿ ಅಶೋಕ್ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

10 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

10 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

11 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

12 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

13 hours ago