ರಾಜ್ಯ

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ; ಎಚ್ ಡಿ ರೇವಣ್ಣ ‌

ಬೆಂಗಳೂರು : ನನ್ನ ಮಗ ಪ್ರಜ್ವಲ್‌ ರೇವಣ್ಣ  ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣ ಹೇಳಿದರು.

ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ಹಗರಣ ಸದ್ದು ಮಾಡಿದೆ ಜೊತೆಗೆ ವಾದ ವಿವಾದಗಳು ಕೂಡ ಮುಂದುವರೆಯಿತು. ಈ ಬೆನ್ನಲ್ಲೆ ವಿಧಾನಸಭೆಯಲ್ಲಿ ಶಾಸಕ ಎಚ್‌ ಡಿ ರೇವಣ್ಣ ಮಾತನಾಡಿ, ನನ್ನ ಮೇಲೆ ಯಾರೋ ಆರೋಪ ಮಾಡಿದ್ದಾರೆ. ಹೆಣ್ಣು ಮಗಳನ್ನ ಕರೆದುಕೊಂಡು ಬಂದ ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ ಎಂದು  ರೇವಣ್ಣ ಪ್ರಶ್ನೆ ಮಾಡಿದರು.

ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೋಟಿಸ್‌ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಇನ್ನು ಶಾಸಕ ಎಚ್‌ ಡಿ ರೇವಣ್ಣ ಬಂಧನದ ಬಗ್ಗೆ ಆರ್‌ ಅಶೋಕ್‌ ಕೂಡ ಸದನದಲ್ಲಿ ಉಲ್ಲೇಖಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪ ಮಾಡುವ ವೇಳೆ, ವಾಲ್ಮೀಕಿ ಕೇಸ್‌ ನಲ್ಲಿ ನೋಟಿಸ್‌ ಕೊಟ್ಟು ಕರೆದೇ ಇಲ್ಲ. ಆದರೆ ರೇವಣ್ಣ, ಭವಾನಿ ರೇವಣ್ಣ ಪ್ರಕರಣದಲ್ಲಿ ಎಸ್‌ ಐಟಿ ತುಂಬಾ ಸ್ಟ್ರಾಂಗ್‌ ಇದ್ರು, ಎಷ್ಟು ಸ್ಟ್ರಾಂಗ್‌ ಅಂದರೆ ಎರಡೇ ದಿನದಲ್ಲಿ ಅರೆಸ್ಟ್‌ ಮಾಡಿದರು. ಮಾಜಿ ಶಾಸಕ ಪ್ರೀತಂಗೌಡ ಕೇಸ್‌ ನಲ್ಲೂ ಹಾಗೆ ಆಯಿತು. ವಾಲ್ಮೀಕಿ ನಿಗಮ ಕೇಸ್ ನಲ್ಲಿ ಇನ್ನೂ ನೋಟಿಸ್‌ ಸಹ ಕೊಟ್ಟಿಲ್ಲ. ಎಸ್‌ ಐಟಿ ಕಚೇರಿಯಲ್ಲಿ ೮ ಗಂಟೆಗಳ ಕಾಲ ಕೂರಿಸಿದ್ದರು. ಏನು ವಾಲ್ಮೀಕಿ ರಾಮಾಯಣ ಓದಲು ಕೂರಿಸಿದ್ದರಾ ಎಂದು ವಿಧಾನಸಭೆಯಲ್ಲಿ ಅಶೋಕ್ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

4 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

11 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

1 hour ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

2 hours ago