ರಾಜ್ಯ

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ; ಎಚ್ ಡಿ ರೇವಣ್ಣ ‌

ಬೆಂಗಳೂರು : ನನ್ನ ಮಗ ಪ್ರಜ್ವಲ್‌ ರೇವಣ್ಣ  ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣ ಹೇಳಿದರು.

ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ಹಗರಣ ಸದ್ದು ಮಾಡಿದೆ ಜೊತೆಗೆ ವಾದ ವಿವಾದಗಳು ಕೂಡ ಮುಂದುವರೆಯಿತು. ಈ ಬೆನ್ನಲ್ಲೆ ವಿಧಾನಸಭೆಯಲ್ಲಿ ಶಾಸಕ ಎಚ್‌ ಡಿ ರೇವಣ್ಣ ಮಾತನಾಡಿ, ನನ್ನ ಮೇಲೆ ಯಾರೋ ಆರೋಪ ಮಾಡಿದ್ದಾರೆ. ಹೆಣ್ಣು ಮಗಳನ್ನ ಕರೆದುಕೊಂಡು ಬಂದ ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ ಎಂದು  ರೇವಣ್ಣ ಪ್ರಶ್ನೆ ಮಾಡಿದರು.

ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೋಟಿಸ್‌ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಇನ್ನು ಶಾಸಕ ಎಚ್‌ ಡಿ ರೇವಣ್ಣ ಬಂಧನದ ಬಗ್ಗೆ ಆರ್‌ ಅಶೋಕ್‌ ಕೂಡ ಸದನದಲ್ಲಿ ಉಲ್ಲೇಖಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪ ಮಾಡುವ ವೇಳೆ, ವಾಲ್ಮೀಕಿ ಕೇಸ್‌ ನಲ್ಲಿ ನೋಟಿಸ್‌ ಕೊಟ್ಟು ಕರೆದೇ ಇಲ್ಲ. ಆದರೆ ರೇವಣ್ಣ, ಭವಾನಿ ರೇವಣ್ಣ ಪ್ರಕರಣದಲ್ಲಿ ಎಸ್‌ ಐಟಿ ತುಂಬಾ ಸ್ಟ್ರಾಂಗ್‌ ಇದ್ರು, ಎಷ್ಟು ಸ್ಟ್ರಾಂಗ್‌ ಅಂದರೆ ಎರಡೇ ದಿನದಲ್ಲಿ ಅರೆಸ್ಟ್‌ ಮಾಡಿದರು. ಮಾಜಿ ಶಾಸಕ ಪ್ರೀತಂಗೌಡ ಕೇಸ್‌ ನಲ್ಲೂ ಹಾಗೆ ಆಯಿತು. ವಾಲ್ಮೀಕಿ ನಿಗಮ ಕೇಸ್ ನಲ್ಲಿ ಇನ್ನೂ ನೋಟಿಸ್‌ ಸಹ ಕೊಟ್ಟಿಲ್ಲ. ಎಸ್‌ ಐಟಿ ಕಚೇರಿಯಲ್ಲಿ ೮ ಗಂಟೆಗಳ ಕಾಲ ಕೂರಿಸಿದ್ದರು. ಏನು ವಾಲ್ಮೀಕಿ ರಾಮಾಯಣ ಓದಲು ಕೂರಿಸಿದ್ದರಾ ಎಂದು ವಿಧಾನಸಭೆಯಲ್ಲಿ ಅಶೋಕ್ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago