ಬೆಂಗಳೂರು : ನನ್ನ ಮಗ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಹೇಳಿದರು.
ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ಹಗರಣ ಸದ್ದು ಮಾಡಿದೆ ಜೊತೆಗೆ ವಾದ ವಿವಾದಗಳು ಕೂಡ ಮುಂದುವರೆಯಿತು. ಈ ಬೆನ್ನಲ್ಲೆ ವಿಧಾನಸಭೆಯಲ್ಲಿ ಶಾಸಕ ಎಚ್ ಡಿ ರೇವಣ್ಣ ಮಾತನಾಡಿ, ನನ್ನ ಮೇಲೆ ಯಾರೋ ಆರೋಪ ಮಾಡಿದ್ದಾರೆ. ಹೆಣ್ಣು ಮಗಳನ್ನ ಕರೆದುಕೊಂಡು ಬಂದ ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ ಎಂದು ರೇವಣ್ಣ ಪ್ರಶ್ನೆ ಮಾಡಿದರು.
ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೋಟಿಸ್ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಇನ್ನು ಶಾಸಕ ಎಚ್ ಡಿ ರೇವಣ್ಣ ಬಂಧನದ ಬಗ್ಗೆ ಆರ್ ಅಶೋಕ್ ಕೂಡ ಸದನದಲ್ಲಿ ಉಲ್ಲೇಖಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪ ಮಾಡುವ ವೇಳೆ, ವಾಲ್ಮೀಕಿ ಕೇಸ್ ನಲ್ಲಿ ನೋಟಿಸ್ ಕೊಟ್ಟು ಕರೆದೇ ಇಲ್ಲ. ಆದರೆ ರೇವಣ್ಣ, ಭವಾನಿ ರೇವಣ್ಣ ಪ್ರಕರಣದಲ್ಲಿ ಎಸ್ ಐಟಿ ತುಂಬಾ ಸ್ಟ್ರಾಂಗ್ ಇದ್ರು, ಎಷ್ಟು ಸ್ಟ್ರಾಂಗ್ ಅಂದರೆ ಎರಡೇ ದಿನದಲ್ಲಿ ಅರೆಸ್ಟ್ ಮಾಡಿದರು. ಮಾಜಿ ಶಾಸಕ ಪ್ರೀತಂಗೌಡ ಕೇಸ್ ನಲ್ಲೂ ಹಾಗೆ ಆಯಿತು. ವಾಲ್ಮೀಕಿ ನಿಗಮ ಕೇಸ್ ನಲ್ಲಿ ಇನ್ನೂ ನೋಟಿಸ್ ಸಹ ಕೊಟ್ಟಿಲ್ಲ. ಎಸ್ ಐಟಿ ಕಚೇರಿಯಲ್ಲಿ ೮ ಗಂಟೆಗಳ ಕಾಲ ಕೂರಿಸಿದ್ದರು. ಏನು ವಾಲ್ಮೀಕಿ ರಾಮಾಯಣ ಓದಲು ಕೂರಿಸಿದ್ದರಾ ಎಂದು ವಿಧಾನಸಭೆಯಲ್ಲಿ ಅಶೋಕ್ ಪ್ರಶ್ನೆ ಮಾಡಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…