ರಾಜ್ಯ

ಅಯೋಧ್ಯೆಗೆ ಹೊರಟ ಹೆಚ್‌ಡಿಡಿ ಕುಟುಂಬ : ಹುಟ್ಟುಹಬ್ಬದ ಹಿನ್ನಲೆ ಅಭಿಮಾನಿಗಳಿಗೆ ಪತ್ರ ಬರೆದ ನಿಖಿಲ್‌ ಕುಮಾರಸ್ವಾಮಿ!

ಬೆಂಗಳೂರು : ಭಾರತ ದೇಶವೇ ಎದುರು ನೋಡುತ್ತಿರುವ, ಸುಮಾರು ೫ ಶತಮಾನಗಳ ಬಹುಸಂಖ್ಯಾತ ಹಿಂದುಗಳ ಕನಸಾಗಿದ್ದ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದೆ.

ಈ ಕಾರ್ಯದಲ್ಲಿ ಭಾಗಿಯಾಗುವಂತೆ ದೇಶ-ವಿದೇಶಗಳ ಅನೇಕ ಮಹಾನ್‌ ನಾಯಕರು ಹಾಗೂ ಗಣ್ಯವಕ್ತಿಗಳಿಗೆ ಆಹ್ವಾನ ನೀಡಲಾಗಿದೆ.
ಕರ್ನಾಟಕ ರಾಜ್ಯದ ಮಣ್ಣಿನ ಮಗ ಮಾಜಿ ಪ್ರಧಾನಿ ಅವರಿಗೂ ಈ ದಿವ್ಯ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ಈ ಹಿನ್ನಲೆ ಇಂದು ಹೆಚ್‌.ಡಿ.ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಅವರ ಮಗ ನಿಖಿಲ್‌ ಕುಮಾರಸ್ವಾಮಿ ಅಯೋಧ್ಯೆಗೆ ಪ್ರವಾಸ ಬೆಳೆಸಿದ್ದಾರೆ.

ಇನ್ನು ನಾಳೆ ಜ.೨೨ರಂದು ನಿಖಿಲ್‌ ಕುಮಾರಸ್ವಾಮಿ ಅವರ ಜನ್ಮದಿನವಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳನ್ನು ಕುರಿತು ಮನವಿ ಪತ್ರ ಒಂದನ್ನು ಬರೆದಿದ್ದಾರೆ.

ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ಜನವರಿ 22, ನನ್ನ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಿಸಿದರೆ ಅದೇ ನನಗೆ ಸಂತೋಷ” ಎಂದು ನಿಖಿಲ್​ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.

andolanait

Recent Posts

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…

15 mins ago

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

1 hour ago

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

2 hours ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

2 hours ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

3 hours ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

3 hours ago