ರಾಜ್ಯ

ಸಚಿವ ನಿತಿನ್‌ ಗಡ್ಕರಿರವರೊಂದಿಗೆ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ: ಎಚ್‌ಡಿಕೆ

ನವದೆಹಲಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಸಾರಿಗೆ ಸಚಿವರು ಈ ಬಗ್ಗೆ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು ಎಂದಿದ್ದಾರೆ.

ಇನ್ನೂ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ. ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42). ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69) ಹಾಗೂ ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69. NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸೇರಿದಂತೆ ಈ ಎಲ್ಲಾ ಯೋಜನೆಗಳ ಬಗ್ಗೆ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

52 mins ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

1 hour ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

1 hour ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

2 hours ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

2 hours ago