ನವದೆಹಲಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.
ಸಾರಿಗೆ ಸಚಿವರು ಈ ಬಗ್ಗೆ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು ಎಂದಿದ್ದಾರೆ.
ಇನ್ನೂ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ. ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42). ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69) ಹಾಗೂ ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69. NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸೇರಿದಂತೆ ಈ ಎಲ್ಲಾ ಯೋಜನೆಗಳ ಬಗ್ಗೆ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದ್ದಾರೆ.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…