ರಾಜ್ಯ

ಸಚಿವ ನಿತಿನ್‌ ಗಡ್ಕರಿರವರೊಂದಿಗೆ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ: ಎಚ್‌ಡಿಕೆ

ನವದೆಹಲಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಸಾರಿಗೆ ಸಚಿವರು ಈ ಬಗ್ಗೆ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು ಎಂದಿದ್ದಾರೆ.

ಇನ್ನೂ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ. ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42). ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69) ಹಾಗೂ ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69. NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸೇರಿದಂತೆ ಈ ಎಲ್ಲಾ ಯೋಜನೆಗಳ ಬಗ್ಗೆ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago