ರಾಜ್ಯ

ಸಚಿವ ನಿತಿನ್‌ ಗಡ್ಕರಿರವರೊಂದಿಗೆ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ: ಎಚ್‌ಡಿಕೆ

ನವದೆಹಲಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಸಾರಿಗೆ ಸಚಿವರು ಈ ಬಗ್ಗೆ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು ಎಂದಿದ್ದಾರೆ.

ಇನ್ನೂ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ. ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42). ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69) ಹಾಗೂ ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69. NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸೇರಿದಂತೆ ಈ ಎಲ್ಲಾ ಯೋಜನೆಗಳ ಬಗ್ಗೆ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪ್ರಚಂಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ: ಅಮಿತ್‌ ಶಾ ವಿಶ್ವಾಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು…

8 mins ago

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…

42 mins ago

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

2 hours ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

2 hours ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

3 hours ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

3 hours ago