ರಾಜ್ಯ

ಎಚ್‌ಡಿಕೆ ಬೆಂಬಲ ನೀಡುವಾಗಲೇ ನೀಡಲಿಲ್ಲ, ಈಗೇನು ಬೆಂಬಲ ನೀಡುತ್ತಾರೆ: ಡಿಕೆಶಿ ತಿರುಗೇಟು

ಬೆಂಗಳೂರು : ಮಾಜಿ ಸಿ.ಎಂ ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

‘ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ ಎಂದು ತಿಳಿಸಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago