ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಆರೋಪಿ ದರ್ಶನಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವುದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದರ್ಶನ್ ಫೋಟೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಗನನ್ನು ಕಳೆದುಕೊಂಡು ರೇಣುಕಾಸ್ವಾಮಿ ಕುಟುಂಬಸ್ಥರು ನೋವಿನಲ್ಲಿದ್ದಾರೆ. ಇತ್ತ ನಮ್ಮದು ಪಾರದರ್ಶಕ ಹಾಗೂ ಹೈಟೆಕ್ ಸರ್ಕಾರ ನಮ್ಮದು ಎಂದು ದಿನಕ್ಕೊಂದು ಕತೆ ಹೇಳುತ್ತಾ ಗೃಹಮಂತ್ರಿ ಡಾ. ಜಿ.ಪರಮೇಶ್ವರ್ ಇದ್ದಾರೆ. ಪರಪ್ಪನ ಅಗ್ರಹಾರದಲ್ಲಿ ನೀಡುತ್ತಿರುವುದೇ ಹೇಟೆಕ್ ಹಾಗಿದೆಯಾ, ಇದಕ್ಕೆಲ್ಲಾ ಸರ್ಕಾರವೇ ಹೊಣೆಯಾಗಬೇಕು ಎಂದು ಅವರು ಕಟುವಾಗಿ ಟೀಕಿಸಿದರು.
ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ಪಂಚತಾರಾ ಸೌಲಭ್ಯವಿದೆ. ಜೈಲಿನಲ್ಲಿ ಈ ವ್ಯವಸ್ಥೆ ಈ ಹಿಂದಿನಿಂದಲೂ ಇದೆ. ಅದು ದರ್ಶನ್ ಅವರ ಮೂಲಕ ಹೊರಗೆ ಬಂದಿದೆ. ಸರ್ಕಾರ, ಅಧಿಕಾರಿಗಳಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇಲ್ಲದಂತಾಗಿದೆ. ಸರ್ಕಾರದ ಮಂತ್ರಿಗಳಿಗೆ ಸಿಎಂ ಹಗರಣಗಳ ಬಗ್ಗೆ ಮಾತನಾಡಲು ಸಮಯವಿಲ್ಲ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ನ್ಯಾಯಾಲಯದಿಂದ ಮಾತ್ರ ನಮಗೆ ನ್ಯಾಯ ಸಿಗಬೇಕು ಎಂದು ಅವರು ಆಗ್ರಹಿಸಿದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…