ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆ ಎಂದ ಕೇಂದ್ರ ಸಚಿವರು
ಆ ಅಧಿಕಾರಿ ಬಗ್ಗೆ ಏನು ಹೇಳಿದ್ದೇನೆ ಎಂಬುದು ಎಲ್ಲರಿಗೂ ಗೊತ್ತಿದೆ
ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಆ ಅಧಿಕಾರಿ ನಾನು ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿದ್ದಾರೆ. ನಾನು ಎಲ್ಲಿ ಬೆದರಿಕೆ ಹಾಕಿದ್ದೇನೆ? ಅವರ ಬಗ್ಗೆ ಇರುವ ವಿಚಾರವನ್ನು ದಾಖಲೆ ಸಮೇತ ಹೇಳಿದ್ದೇನೆ. ಅದನ್ನು ಬೆದರಿಕೆ ಎಂದರೆ ಹೇಗೆ? ಕೇವಲ ರಾಜಕೀಯ ದುರುದ್ದೇಶದಿಂದ ದೂರು ನೀಡಿದ್ದಾರೆ. ನಾನೂ ಅದಕ್ಕೆಲ್ಲ ಹೆದರಲ್ಲ, ಅವರೂ ನನಗೆ ಹೆದರಬೇಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ನಾನು ಆ ಅಧಿಕಾರಿ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದು ನಿಜ. ನಾನು ಏನು ಮಾತನಾಡಿದ್ದೇನೆ ಎನ್ನುವುದನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ. ಆ ಮಾಧ್ಯಮಗೋಷ್ಠಿ ನಂತರ ಆ ಅಧಿಕಾರಿ ಸಹೋದ್ಯೋಗಿಗಳಿಗೆ ಬರೆದ ಪತ್ರದ ಬಗ್ಗೆಯೂ ಗೊತ್ತಿದೆ ಎಂದು ಸಚಿವರು ತಿಳಿಸಿದರು.
ಈ ವಿಷಯ ನ್ಯಾಯಾಲಯಕ್ಕೆ ಬರುತ್ತದೆ, ಅಲ್ಲಿ ಎದುರಿಸುತ್ತೇನೆ. ನಾನು ಎಲ್ಲಿಯೂ ಹೆದರಿ ಓಡುವ ವ್ಯಕ್ತಿ ನಾನಲ್ಲ. ಅವರೂ ನನಗೆ ಹೆದರಬೇಕಾಗಿಲ್ಲ. ನಾನೂ ಅವರಿಗೆ ಹೆದರಬೇಕಾಗಿಲ್ಲ. ನನ್ನ ವಿರುದ್ಧ 12 ವರ್ಷಗಳಿಂದ ಗಣಿಗಾರಿಕೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಯಾವಾಗ ಕರೆದರೂ ಹೋಗಿದ್ದೇನೆ. ಕೆಲ ದಿನಗಳ ಹಿಂದೆಯೂ ಹೋಗಿದ್ದೇನೆ. ಬರುವುದಿಲ್ಲ ಎಂದು ನಾನು ಹೇಳಿದ್ದೇನೆಯೇ ಎಂದು ಅವರು ಕೇಳಿದರು.
ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ. ರಕ್ಷಿಸಲಿ, ನ್ಯಾಯಾಲಯ ಇದೆ, ಅಲ್ಲಿಯೇ ಎದುರಿಸುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಅವರು ಹೇಳಿದರು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…