ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆ ಎಂದ ಕೇಂದ್ರ ಸಚಿವರು
ಆ ಅಧಿಕಾರಿ ಬಗ್ಗೆ ಏನು ಹೇಳಿದ್ದೇನೆ ಎಂಬುದು ಎಲ್ಲರಿಗೂ ಗೊತ್ತಿದೆ
ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಆ ಅಧಿಕಾರಿ ನಾನು ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿದ್ದಾರೆ. ನಾನು ಎಲ್ಲಿ ಬೆದರಿಕೆ ಹಾಕಿದ್ದೇನೆ? ಅವರ ಬಗ್ಗೆ ಇರುವ ವಿಚಾರವನ್ನು ದಾಖಲೆ ಸಮೇತ ಹೇಳಿದ್ದೇನೆ. ಅದನ್ನು ಬೆದರಿಕೆ ಎಂದರೆ ಹೇಗೆ? ಕೇವಲ ರಾಜಕೀಯ ದುರುದ್ದೇಶದಿಂದ ದೂರು ನೀಡಿದ್ದಾರೆ. ನಾನೂ ಅದಕ್ಕೆಲ್ಲ ಹೆದರಲ್ಲ, ಅವರೂ ನನಗೆ ಹೆದರಬೇಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ನಾನು ಆ ಅಧಿಕಾರಿ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದು ನಿಜ. ನಾನು ಏನು ಮಾತನಾಡಿದ್ದೇನೆ ಎನ್ನುವುದನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ. ಆ ಮಾಧ್ಯಮಗೋಷ್ಠಿ ನಂತರ ಆ ಅಧಿಕಾರಿ ಸಹೋದ್ಯೋಗಿಗಳಿಗೆ ಬರೆದ ಪತ್ರದ ಬಗ್ಗೆಯೂ ಗೊತ್ತಿದೆ ಎಂದು ಸಚಿವರು ತಿಳಿಸಿದರು.
ಈ ವಿಷಯ ನ್ಯಾಯಾಲಯಕ್ಕೆ ಬರುತ್ತದೆ, ಅಲ್ಲಿ ಎದುರಿಸುತ್ತೇನೆ. ನಾನು ಎಲ್ಲಿಯೂ ಹೆದರಿ ಓಡುವ ವ್ಯಕ್ತಿ ನಾನಲ್ಲ. ಅವರೂ ನನಗೆ ಹೆದರಬೇಕಾಗಿಲ್ಲ. ನಾನೂ ಅವರಿಗೆ ಹೆದರಬೇಕಾಗಿಲ್ಲ. ನನ್ನ ವಿರುದ್ಧ 12 ವರ್ಷಗಳಿಂದ ಗಣಿಗಾರಿಕೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಯಾವಾಗ ಕರೆದರೂ ಹೋಗಿದ್ದೇನೆ. ಕೆಲ ದಿನಗಳ ಹಿಂದೆಯೂ ಹೋಗಿದ್ದೇನೆ. ಬರುವುದಿಲ್ಲ ಎಂದು ನಾನು ಹೇಳಿದ್ದೇನೆಯೇ ಎಂದು ಅವರು ಕೇಳಿದರು.
ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ. ರಕ್ಷಿಸಲಿ, ನ್ಯಾಯಾಲಯ ಇದೆ, ಅಲ್ಲಿಯೇ ಎದುರಿಸುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಅವರು ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…