ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆ ಎಂದ ಕೇಂದ್ರ ಸಚಿವರು
ಆ ಅಧಿಕಾರಿ ಬಗ್ಗೆ ಏನು ಹೇಳಿದ್ದೇನೆ ಎಂಬುದು ಎಲ್ಲರಿಗೂ ಗೊತ್ತಿದೆ
ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಆ ಅಧಿಕಾರಿ ನಾನು ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿದ್ದಾರೆ. ನಾನು ಎಲ್ಲಿ ಬೆದರಿಕೆ ಹಾಕಿದ್ದೇನೆ? ಅವರ ಬಗ್ಗೆ ಇರುವ ವಿಚಾರವನ್ನು ದಾಖಲೆ ಸಮೇತ ಹೇಳಿದ್ದೇನೆ. ಅದನ್ನು ಬೆದರಿಕೆ ಎಂದರೆ ಹೇಗೆ? ಕೇವಲ ರಾಜಕೀಯ ದುರುದ್ದೇಶದಿಂದ ದೂರು ನೀಡಿದ್ದಾರೆ. ನಾನೂ ಅದಕ್ಕೆಲ್ಲ ಹೆದರಲ್ಲ, ಅವರೂ ನನಗೆ ಹೆದರಬೇಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ನಾನು ಆ ಅಧಿಕಾರಿ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದು ನಿಜ. ನಾನು ಏನು ಮಾತನಾಡಿದ್ದೇನೆ ಎನ್ನುವುದನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ. ಆ ಮಾಧ್ಯಮಗೋಷ್ಠಿ ನಂತರ ಆ ಅಧಿಕಾರಿ ಸಹೋದ್ಯೋಗಿಗಳಿಗೆ ಬರೆದ ಪತ್ರದ ಬಗ್ಗೆಯೂ ಗೊತ್ತಿದೆ ಎಂದು ಸಚಿವರು ತಿಳಿಸಿದರು.
ಈ ವಿಷಯ ನ್ಯಾಯಾಲಯಕ್ಕೆ ಬರುತ್ತದೆ, ಅಲ್ಲಿ ಎದುರಿಸುತ್ತೇನೆ. ನಾನು ಎಲ್ಲಿಯೂ ಹೆದರಿ ಓಡುವ ವ್ಯಕ್ತಿ ನಾನಲ್ಲ. ಅವರೂ ನನಗೆ ಹೆದರಬೇಕಾಗಿಲ್ಲ. ನಾನೂ ಅವರಿಗೆ ಹೆದರಬೇಕಾಗಿಲ್ಲ. ನನ್ನ ವಿರುದ್ಧ 12 ವರ್ಷಗಳಿಂದ ಗಣಿಗಾರಿಕೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಯಾವಾಗ ಕರೆದರೂ ಹೋಗಿದ್ದೇನೆ. ಕೆಲ ದಿನಗಳ ಹಿಂದೆಯೂ ಹೋಗಿದ್ದೇನೆ. ಬರುವುದಿಲ್ಲ ಎಂದು ನಾನು ಹೇಳಿದ್ದೇನೆಯೇ ಎಂದು ಅವರು ಕೇಳಿದರು.
ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ. ರಕ್ಷಿಸಲಿ, ನ್ಯಾಯಾಲಯ ಇದೆ, ಅಲ್ಲಿಯೇ ಎದುರಿಸುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಅವರು ಹೇಳಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…