ಬೆಂಗಳೂರು: ಭೂಮಿ ಅಕ್ರಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವವ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ಎಚ್ಡಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ನಾನು ಹೆದರಲ್ಲ. ಅವರ ಹೆಸರನಲ್ಲಿ ಯಾವ್ಯಾವ ಕಡೆ ಎಷ್ಟು ಭೂಮಿ ಇದೆಯೆಂದು ಬಹಿರಂಗ ಪಡಿಸಲಿ. ನಾನು ಸಹ ನನ್ನ ಹೆಸರಿನಲ್ಲಿ ಹಾಗೂ ನನ್ನ ಮಕ್ಕಳ ಹೆಸರಿನಲ್ಲಿ ಎಲ್ಲೆಲ್ಲಿ ಎಷ್ಟೇಷ್ಟು ಭೂಮಿ ಇದೆ ಎಂದು ಬಹಿರಂಗಪಡಿಸುತ್ತೇನೆ. ಒಂದು ವೇಳೆ ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇ ಆದರೆ ಯಾವುದೇ ಶಿಕ್ಷೆಗೂ ಸಿದ್ಧನಾಗಿರುವೆ ಎಂದು ಹೇಳಿದ್ದಾರೆ.
ಏನಿದು ಜಟಾಪಟಿ?
ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಮಾಜಿ ಪ್ರಧಾನಿಯವರ ಮಗ ನಾನು. ಕೇತಗಾನಹಳ್ಳಿಯಲ್ಲಿ 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಳಬೇಕಾ? ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಅಲ್ಲದೇ ಡಿಸಿಎಂ ಎನ್ನುವ ವ್ಯಕ್ತಿ ಹಗರಣಗಳ ಮಹಾನಾಯಕ ಮತ್ತು ಏಳು ಕಂಪೆನಿ ಹೆಸರನಲ್ಲಿ ವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುತ್ತೇನೆ ಎಂದಿದ್ದರು.
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…
ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…