ಬೆಂಗಳೂರು: ಭೂಮಿ ಅಕ್ರಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವವ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ಎಚ್ಡಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ನಾನು ಹೆದರಲ್ಲ. ಅವರ ಹೆಸರನಲ್ಲಿ ಯಾವ್ಯಾವ ಕಡೆ ಎಷ್ಟು ಭೂಮಿ ಇದೆಯೆಂದು ಬಹಿರಂಗ ಪಡಿಸಲಿ. ನಾನು ಸಹ ನನ್ನ ಹೆಸರಿನಲ್ಲಿ ಹಾಗೂ ನನ್ನ ಮಕ್ಕಳ ಹೆಸರಿನಲ್ಲಿ ಎಲ್ಲೆಲ್ಲಿ ಎಷ್ಟೇಷ್ಟು ಭೂಮಿ ಇದೆ ಎಂದು ಬಹಿರಂಗಪಡಿಸುತ್ತೇನೆ. ಒಂದು ವೇಳೆ ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇ ಆದರೆ ಯಾವುದೇ ಶಿಕ್ಷೆಗೂ ಸಿದ್ಧನಾಗಿರುವೆ ಎಂದು ಹೇಳಿದ್ದಾರೆ.
ಏನಿದು ಜಟಾಪಟಿ?
ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಮಾಜಿ ಪ್ರಧಾನಿಯವರ ಮಗ ನಾನು. ಕೇತಗಾನಹಳ್ಳಿಯಲ್ಲಿ 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಳಬೇಕಾ? ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಅಲ್ಲದೇ ಡಿಸಿಎಂ ಎನ್ನುವ ವ್ಯಕ್ತಿ ಹಗರಣಗಳ ಮಹಾನಾಯಕ ಮತ್ತು ಏಳು ಕಂಪೆನಿ ಹೆಸರನಲ್ಲಿ ವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುತ್ತೇನೆ ಎಂದಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…