ಬೆಂಗಳೂರು: ಭೂಮಿ ಅಕ್ರಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವವ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ಎಚ್ಡಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ನಾನು ಹೆದರಲ್ಲ. ಅವರ ಹೆಸರನಲ್ಲಿ ಯಾವ್ಯಾವ ಕಡೆ ಎಷ್ಟು ಭೂಮಿ ಇದೆಯೆಂದು ಬಹಿರಂಗ ಪಡಿಸಲಿ. ನಾನು ಸಹ ನನ್ನ ಹೆಸರಿನಲ್ಲಿ ಹಾಗೂ ನನ್ನ ಮಕ್ಕಳ ಹೆಸರಿನಲ್ಲಿ ಎಲ್ಲೆಲ್ಲಿ ಎಷ್ಟೇಷ್ಟು ಭೂಮಿ ಇದೆ ಎಂದು ಬಹಿರಂಗಪಡಿಸುತ್ತೇನೆ. ಒಂದು ವೇಳೆ ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇ ಆದರೆ ಯಾವುದೇ ಶಿಕ್ಷೆಗೂ ಸಿದ್ಧನಾಗಿರುವೆ ಎಂದು ಹೇಳಿದ್ದಾರೆ.
ಏನಿದು ಜಟಾಪಟಿ?
ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಮಾಜಿ ಪ್ರಧಾನಿಯವರ ಮಗ ನಾನು. ಕೇತಗಾನಹಳ್ಳಿಯಲ್ಲಿ 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಳಬೇಕಾ? ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಅಲ್ಲದೇ ಡಿಸಿಎಂ ಎನ್ನುವ ವ್ಯಕ್ತಿ ಹಗರಣಗಳ ಮಹಾನಾಯಕ ಮತ್ತು ಏಳು ಕಂಪೆನಿ ಹೆಸರನಲ್ಲಿ ವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುತ್ತೇನೆ ಎಂದಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…