ನೆರೆಯ ಕೇರಳದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಜೆಎನ್ 1 ಉಲ್ಬಣಗೊಂಡಿರುವುದು ಇದೀಗ ಕರ್ನಾಟಕದಲ್ಲಿಯೂ ಸಹ ಆತಂಕವನ್ನು ಉಂಟುಮಾಡಿದೆ. ಈ ಸಂಬಂಧ ಇಂದು ( ಡಿಸೆಂಬರ್ 19 ) ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆಯೊಂದನ್ನು ಹೊರಡಿಸಿದೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕೊವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಸೂಚಿಸಲಾಗಿದೆ.
ಜಂಟಿ ನಿರ್ದೇಶಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಈ ಕೆಳಕಂಡ ಅಂಶಗಳ ಕುರಿತ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದೆ.
1. ಪಿಎಸ್ಎ ಪ್ಲಾಂಟ್ಗಳ ಕಾರ್ಯವೈಖರಿ ಬಗ್ಗೆ ವರದಿ ನೀಡುವುದು.
2. ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ಗಳ ಬಗ್ಗೆ ವರದಿ ನೀಡುವುದು.
3. ಮುಖ್ಯವಾಗಿ ಐಸಿಯು ಉಪಕರಣಗಳು ಹಾಗೂ ವೆಂಟಿಲೇಟರ್ಗಳನ್ನು ಸ್ವತಃ ಪರಿಶೀಲಿಸಿ ಕಾರ್ಯ ನಿರ್ವಹಣೆ ಬಗ್ಗೆ ವರದಿ ನೀಡುವುದು.
4. ಎಲ್ಲಾ ಆಕ್ಸಿಜನ್ ಸಿಲಿಂಡರ್ಗಳನ್ನು ತುಂಬಿಸುವ ಬಗ್ಗೆ ಕ್ರಮ ಕೈಗೊಂಡು ವರದಿ ಸಲ್ಲಿಸುವುದು.
5. ಆಕ್ಸಿಜನ್ ಕಾನ್ಸಂಟ್ರೇಟರ್ ಬಗ್ಗೆ ತಪಾಸಣೆ ಕೈಗೊಂಡು ವರದಿ ನೀಡುವುದು.
6. ಮೆಡಿಕಲ್ ಗ್ಯಾಸ್ ಪೈಪ್ಲೈನ್ ಬಗ್ಗೆ ತಪಾಸಣೆ ಕೈಗೊಂಡು ವರದಿ ನೀಡುವುದು.
7. ಐಸಿಯುನಲ್ಲಿ ಇರುವ ಎಲ್ಲಾ ಯಂತ್ರೋಪಕರಣಗಳ ಬಗ್ಗೆ ತಪಾಸಣೆ ಮತ್ತು ಔಷಧಿಗಳ ಲಭ್ಯತೆ ಬಗ್ಗೆ ಕ್ರಮ ಕೈಗೊಳ್ಳುವುದು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…