ರಾಜ್ಯ

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ನಂತರ ಸೇವಿಸುವಂತೆ ಸಲಹೆ ನೀಡಲಾಗಿದೆ.

ಎಚ್5ಎನ್1 ಹಕ್ಕಿಜ್ವರ ಹೆಸರಘಟ್ಟದ ಮಠ್ಕೂರು ಗ್ರಾಮದ ರಾಜ್ಯ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಗಳ ಸಹಯೋಗದಲ್ಲಿ ಏಪ್ರಿಲ್.14ರಿಂದ 10 ದಿನಗಳ ಕಾಲ ತೀವ್ರ ನಿಗಾವಹಿಸುವಿಕೆ ಮತ್ತು ನಿಯಂತ್ರಣ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪಶು ರೋಗಗಳ ಸಂಸ್ಥೆ ಪ್ರಯೋಗಾಲಯ ವರದಿಗಳ ಆಧಾರದ ಮೇಲೆ ರಾಜ್ಯ ಹಾಗೂ ಜಿಲ್ಲಾ ತ್ವರಿತ ಪ್ರತಿಕ್ರಿಯಾ ತಂಡಗಳು ಮತ್ತು ಹೆಸರಘಟ್ಟ ಹಾಗೂ ಸೊನ್ನೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ತಂಡಗಳನ್ನು ತಕ್ಷಣವೇ ನಿಯೋಜಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸೋಂಕಿತ ವಲಯದ 0-3 ಕಿ.ಮೀ ವ್ಯಾಪ್ತಿಯಲ್ಲಿ ಸೋಂಕಿತ ವಲಯ ಮತ್ತು 3-10 ಕಿ.ಮೀ ವ್ಯಾಪ್ತಿಯಲ್ಲಿ ನಿಗಾವಹಿಕೆ ವಲಯವನ್ನು ಸ್ಥಾಪಿಸಲಾಗಿತ್ತು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಎಲ್ಲಾ ಪಕ್ಷಿಗಳನ್ನು ನಾಶಪಡಿಸಿ, ಮೊಟ್ಟೆಗಳು ಮತ್ತು ಸೋಂಕಿತ ಆಹಾರವನ್ನು ರಾಷ್ಟ್ರಿ?ಯ ಹಾಗೂ ಅಂತರರಾಷ್ಟ್ರೀಯ ಜೈವಿಕ ಭದ್ರತಾ ನಿಯಮಾನುಸಾರ ಸುರಕ್ಷಿತವಾಗಿ ವಿಲೇವಾರಿ ಮಾಡಿದೆ ಎಂದು ವಿವರಿಸಲಾಗಿದೆ.

ಸೋಂಕಿತ ಪ್ರದೇಶದ 10 ಕಿ.ಮೀ ವ್ಯಾಪ್ತಿಯೊಳಗಿನ 22 ಗ್ರಾಮಗಳಲ್ಲಿ ಒಟ್ಟು 28,172 ಜನಸಂಖ್ಯೆಯನ್ನು 10 ದಿನಗಳವರೆಗೆ ಸಮಗ್ರವಾಗಿ ಪರಿಶೀಲಿಸಲಾಗಿದೆ. ಅನೇಕ ಸುತ್ತಿನ ನಿಗಾವಹಿಸುವಿಕೆ ಕಾರ್ಯಗಳನ್ನು ಕೈಗೊಂಡು ನಿಯಮಾನುಸಾರ ಸ್ವಚ್ಛತಾ ಕ್ರಮಗಳನ್ನು ಪಾಲಿಸಲಾಗಿದೆ ಎಂದು ತಿಳಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago