ರಾಜ್ಯ

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ನಂತರ ಸೇವಿಸುವಂತೆ ಸಲಹೆ ನೀಡಲಾಗಿದೆ.

ಎಚ್5ಎನ್1 ಹಕ್ಕಿಜ್ವರ ಹೆಸರಘಟ್ಟದ ಮಠ್ಕೂರು ಗ್ರಾಮದ ರಾಜ್ಯ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಗಳ ಸಹಯೋಗದಲ್ಲಿ ಏಪ್ರಿಲ್.14ರಿಂದ 10 ದಿನಗಳ ಕಾಲ ತೀವ್ರ ನಿಗಾವಹಿಸುವಿಕೆ ಮತ್ತು ನಿಯಂತ್ರಣ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪಶು ರೋಗಗಳ ಸಂಸ್ಥೆ ಪ್ರಯೋಗಾಲಯ ವರದಿಗಳ ಆಧಾರದ ಮೇಲೆ ರಾಜ್ಯ ಹಾಗೂ ಜಿಲ್ಲಾ ತ್ವರಿತ ಪ್ರತಿಕ್ರಿಯಾ ತಂಡಗಳು ಮತ್ತು ಹೆಸರಘಟ್ಟ ಹಾಗೂ ಸೊನ್ನೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ತಂಡಗಳನ್ನು ತಕ್ಷಣವೇ ನಿಯೋಜಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸೋಂಕಿತ ವಲಯದ 0-3 ಕಿ.ಮೀ ವ್ಯಾಪ್ತಿಯಲ್ಲಿ ಸೋಂಕಿತ ವಲಯ ಮತ್ತು 3-10 ಕಿ.ಮೀ ವ್ಯಾಪ್ತಿಯಲ್ಲಿ ನಿಗಾವಹಿಕೆ ವಲಯವನ್ನು ಸ್ಥಾಪಿಸಲಾಗಿತ್ತು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಎಲ್ಲಾ ಪಕ್ಷಿಗಳನ್ನು ನಾಶಪಡಿಸಿ, ಮೊಟ್ಟೆಗಳು ಮತ್ತು ಸೋಂಕಿತ ಆಹಾರವನ್ನು ರಾಷ್ಟ್ರಿ?ಯ ಹಾಗೂ ಅಂತರರಾಷ್ಟ್ರೀಯ ಜೈವಿಕ ಭದ್ರತಾ ನಿಯಮಾನುಸಾರ ಸುರಕ್ಷಿತವಾಗಿ ವಿಲೇವಾರಿ ಮಾಡಿದೆ ಎಂದು ವಿವರಿಸಲಾಗಿದೆ.

ಸೋಂಕಿತ ಪ್ರದೇಶದ 10 ಕಿ.ಮೀ ವ್ಯಾಪ್ತಿಯೊಳಗಿನ 22 ಗ್ರಾಮಗಳಲ್ಲಿ ಒಟ್ಟು 28,172 ಜನಸಂಖ್ಯೆಯನ್ನು 10 ದಿನಗಳವರೆಗೆ ಸಮಗ್ರವಾಗಿ ಪರಿಶೀಲಿಸಲಾಗಿದೆ. ಅನೇಕ ಸುತ್ತಿನ ನಿಗಾವಹಿಸುವಿಕೆ ಕಾರ್ಯಗಳನ್ನು ಕೈಗೊಂಡು ನಿಯಮಾನುಸಾರ ಸ್ವಚ್ಛತಾ ಕ್ರಮಗಳನ್ನು ಪಾಲಿಸಲಾಗಿದೆ ಎಂದು ತಿಳಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

18 mins ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

9 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

13 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

13 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

13 hours ago