ರಾಜ್ಯ

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ನಂತರ ಸೇವಿಸುವಂತೆ ಸಲಹೆ ನೀಡಲಾಗಿದೆ.

ಎಚ್5ಎನ್1 ಹಕ್ಕಿಜ್ವರ ಹೆಸರಘಟ್ಟದ ಮಠ್ಕೂರು ಗ್ರಾಮದ ರಾಜ್ಯ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಗಳ ಸಹಯೋಗದಲ್ಲಿ ಏಪ್ರಿಲ್.14ರಿಂದ 10 ದಿನಗಳ ಕಾಲ ತೀವ್ರ ನಿಗಾವಹಿಸುವಿಕೆ ಮತ್ತು ನಿಯಂತ್ರಣ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪಶು ರೋಗಗಳ ಸಂಸ್ಥೆ ಪ್ರಯೋಗಾಲಯ ವರದಿಗಳ ಆಧಾರದ ಮೇಲೆ ರಾಜ್ಯ ಹಾಗೂ ಜಿಲ್ಲಾ ತ್ವರಿತ ಪ್ರತಿಕ್ರಿಯಾ ತಂಡಗಳು ಮತ್ತು ಹೆಸರಘಟ್ಟ ಹಾಗೂ ಸೊನ್ನೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ತಂಡಗಳನ್ನು ತಕ್ಷಣವೇ ನಿಯೋಜಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸೋಂಕಿತ ವಲಯದ 0-3 ಕಿ.ಮೀ ವ್ಯಾಪ್ತಿಯಲ್ಲಿ ಸೋಂಕಿತ ವಲಯ ಮತ್ತು 3-10 ಕಿ.ಮೀ ವ್ಯಾಪ್ತಿಯಲ್ಲಿ ನಿಗಾವಹಿಕೆ ವಲಯವನ್ನು ಸ್ಥಾಪಿಸಲಾಗಿತ್ತು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಎಲ್ಲಾ ಪಕ್ಷಿಗಳನ್ನು ನಾಶಪಡಿಸಿ, ಮೊಟ್ಟೆಗಳು ಮತ್ತು ಸೋಂಕಿತ ಆಹಾರವನ್ನು ರಾಷ್ಟ್ರಿ?ಯ ಹಾಗೂ ಅಂತರರಾಷ್ಟ್ರೀಯ ಜೈವಿಕ ಭದ್ರತಾ ನಿಯಮಾನುಸಾರ ಸುರಕ್ಷಿತವಾಗಿ ವಿಲೇವಾರಿ ಮಾಡಿದೆ ಎಂದು ವಿವರಿಸಲಾಗಿದೆ.

ಸೋಂಕಿತ ಪ್ರದೇಶದ 10 ಕಿ.ಮೀ ವ್ಯಾಪ್ತಿಯೊಳಗಿನ 22 ಗ್ರಾಮಗಳಲ್ಲಿ ಒಟ್ಟು 28,172 ಜನಸಂಖ್ಯೆಯನ್ನು 10 ದಿನಗಳವರೆಗೆ ಸಮಗ್ರವಾಗಿ ಪರಿಶೀಲಿಸಲಾಗಿದೆ. ಅನೇಕ ಸುತ್ತಿನ ನಿಗಾವಹಿಸುವಿಕೆ ಕಾರ್ಯಗಳನ್ನು ಕೈಗೊಂಡು ನಿಯಮಾನುಸಾರ ಸ್ವಚ್ಛತಾ ಕ್ರಮಗಳನ್ನು ಪಾಲಿಸಲಾಗಿದೆ ಎಂದು ತಿಳಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago