ರಾಜ್ಯ

ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ಹಾಗೂ ಅವುಗಳ ಪರವಾಗಿ ಜಾಹೀರಾತು, ಸೇವನೆಗೆ ಪ್ರಚೋದನೆ ನೀಡುವುದನ್ನು ನಿಷೇಧಿಸಿ ಆರೋಗ್ಯ ಇಲಾಖೆ ಇಂದು ( ಫೆಬ್ರವರಿ 7 ) ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯ ಕಾಪಾಡಲು ಸಂವಿಧಾನದ 47ನೇ ವಿಧಿಯಲ್ಲಿ ಸರ್ಕಾರಕ್ಕೆ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ. ತಂಬಾಕು ಹಾಗೂ ನಿಕೋಟಿನ್‌ ಒಳಗೊಂಡ ಹುಕ್ಕಾ, ತಂಬಾಕು ಹಾಗೂ ನಿಕೋಟಿನ್‌ ರಹಿತ ಹುಕ್ಕಾ, ಫ್ಲೇವರ್‌, ಮೊಲಾಸಿಸ್‌, ಶಿಶಾ ಇರುವ ಹೀಗೆ ಎಲ್ಲಾ ರೀತಿಯ ಹುಕ್ಕಾಗಳನ್ನೂ ಸಹ ನಿಷೇಧಿಸಲಾಗಿದೆ.

ಇನ್ನು ಈ ಆದೇಶವನ್ನು ಉಲ್ಲಂಘಿಸಿ ಹುಕ್ಕಾ ಸೇವನೆ ಮಾಡಿದರೆ ಅಂತಹವರ ವಿರುದ್ಧ ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಕಾಯ್ದೆ, ಮಕ್ಕಳ ಆರೈಕೆ ಮತ್ತು ರಕ್ಷಣ ಕಾಯ್ದೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕರ್ನಾಟಕ ವಿಷ ( ಸ್ವಾಧೀನ ಮತ್ತು ಮಾರಾಟ ) ಕಾಯ್ದೆ, ಭಾರತ ದಂಡ ಸಹಿತೆ ಹಾಗೂ ಅಗ್ನಿ ನಿಯಂತ್ರಣ ಮತ್ತು ಸುರಕ್ಷತಾ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಆದೇಶಿಸಿದೆ.

ವಿಶ್‌ ಆರೋಗ್ಯ ಸಂಸ್ಥೆ ಹುಕ್ಕಾವನ್ನು ವ್ಯಸನಕಾರಿ ಉತ್ಪನ್ನ ಎಂದಿದ್ದು, ಹುಕ್ಕಾ ಸೇವನೆ ಆರೋಗ್ಯಕ್ಕೆ ಹಾನಿಕರ, ಹುಕ್ಕಾ ಬಾರ್‌ಗಳು ಅಗ್ನಿ ಅನಾಹುತಕ್ಕೆ ಕಾರಣವಾಗುತ್ತಿವೆ. ಈ ಎಲ್ಲಾ ಕಾರಣಗಳಿಂದಾಗಿ ಹುಕ್ಕಾ ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

andolana

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

24 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

48 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

60 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago