ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸುವ ಆದೇಶ ಹೊರಡಿಸಿದೆ.
ಹಿಂದಿನ ಆದೇಶದಂತೆ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಕುಟುಂಬಗಳಿಗೆ ಈ ಯೋಜನೆ ಜಾರಿಯಲ್ಲಿತ್ತು. ಇದೀಗ ದಿನಗೂಲಿ ನೌಕರರಿಗೂ ಅದೇ ಸೌಲಭ್ಯವನ್ನು ನೀಡಲು ಸರ್ಕಾರ ನಿರ್ಧರಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಭಾಕರ ಟಿ ಅವರು ಹೊರಡಿಸಿದ ಆದೇಶದಲ್ಲಿ, ದಿನಗೂಲಿ ನೌಕರರ ಸಂಘದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಈ ಯೋಜನೆಯಡಿ ನೌಕರರಿಂದ ಮಾಸಿಕ ಕೊಡುಗೆ ಪಡೆಯಲಾಗುವುದು. ಉಳಿದ ಹಣವನ್ನು ರಾಜ್ಯ ಖಜಾನೆಯಿಂದ ಪಾವತಿಸಲಾಗುತ್ತದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಎಲ್ಲಾ ತಾತ್ಕಾಲಿಕ ಉದ್ಯೋಗಿಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…