ರಾಜ್ಯ

ಆರೋಗ್ಯ ಚೇತರಿಕೆ, ಯಾವುದೇ ಆತಂಕಪಡಬೇಡಿ : ದೇವೇಗೌಡ ಆರೋಗ್ಯದ ಬಗ್ಗೆ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು : ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.

ದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಎಚ್ ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಆಶೀರ್ವಾದದಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವೈದ್ಯರ ಚಿಕಿತ್ಸೆಯಿಂದ ಗೌಡರ ಆರೋಗ್ಯ ಸಮಸ್ಯೆಗಳು ಪರಿಹಾರವಾಗಿದೆ. ಅಭಿಮಾನಿಗಳು ಕಾರ್ಯಕರ್ತರು ಆತಂಕಪಡುವ ಅವಶ್ಯಕತೆ ಇಲ್ಲ. ಇನ್ನೊಂದು ಮೂರ್ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ:-ಜೀವಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ದೇವೇಗೌಡರು ಚೇತರಿಸಿಕೊಂಡಿದ್ದಾರೆ.

ದೇವೇಗೌಡರು ದಾಖಲಾಗುತ್ತಿದ್ದಂತೆ ಪುತ್ರ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಆಸ್ಪತ್ರೆಗೆ ದೌಡಾಯಿಸಿದ್ದರು. ತಂದೆಯ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೇ ಹಿಂದಿರುಗಿದ್ದರು. ನಂತರ ಆಪ್ತರಿಂದ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸಂದೇಶ ರವಾನಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

1 hour ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

4 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

6 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago